Friday 26th, April 2024
canara news

ಮಂಗಳೂರು ಆಕ್ಸಿಸ್ ಬ್ಯಾಂಕ್ ಹಣ ದರೋಡೆ: ಮತ್ತಿಬ್ಬರ ಬಂಧನ

Published On : 25 May 2017   |  Reported By : Canaranews Network


ಮಂಗಳೂರು :ಮಂಗಳೂರಿನ ಯೆಯ್ಯಾಡಿಯ ಆಕ್ಸಿಸ್ ಬ್ಯಾಂಕ್ ಕರೆನ್ಸಿ ಚೆಸ್ಟ್ ನಿಂದ 7.5 ಕೋಟಿ ರು. ಹಣವನ್ನು ಬೆಂಗಳೂರಿನ ಕೋರಮಂಗಲಕ್ಕೆ ವಾಹನದಲ್ಲಿ ಸಾಗಿಸುವ ವೇಳೆ ಹಣ ಕದ್ದು ಪರಾರಿಯಾದ ಘಟನೆಗೆ ಸಂಬಂಧಿಸಿ ಪೊಲೀಸರು ಮಂಗಳವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೇರಿದೆ. ಬಂಧಿತರನ್ನು ಮಡಕೇರಿ ಸೋಮವಾರಪೇಟೆ ತಾಲೂಕಿನ ಸುರ್ಲಾಬಿ ನಿವಾಸಿ ರವಿ ಯಾನೆ ರವೀಂದ್ರ (42), ಮನು ಯಾನೆ ಮನೀಶ್ (45) ಎಂದು ಗುರುತಿಸಲಾಗಿದೆ

ಮಂಗಳೂರಿನ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ ಬೆಂಗಳೂರಿನ ಕೋರಮಂಗಲದ ಆಕ್ಸಿಸ್ ಬ್ಯಾಂಕ್ ಶಾಖೆಗೆ ಹಣ ಸಾಗಿಸುತ್ತಿದ್ದ ನಾಲ್ವರು ಸಿಬ್ಬಂದಿಗಳು ಹಣದ ಸಮೇತ ಮೇ 11 ಗುರುವಾರದಂದು ನಾಪತ್ತೆಯಾಗಿದ್ದರು.ಮೇ 15ರಂದು ಗನ್ ಮ್ಯಾನ್ ಟಿ.ಎ. ಪೂವಣ್ಣ, ವಾಹನ ಚಾಲಕ ಚಿತ್ರದುರ್ಗದ ಟಿ.ಪಿ.ಕರಿಬಸಪ್ಪ ಹಾಗೂ ಕೊಡಗು ಜಿಲ್ಲೆಯ ಕಾಶಿಯಪ್ಪನನ್ನು ಪೊಲೀಸರು ಬಂಧಿಸಿ 6.3 ಕೋಟಿ ರು. ಹಣ ವಶಪಡಿಸಿಕೊಳ್ಳಲಾಗಿತ್ತು.

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here