ಮಂಗಳೂರು :ಮಂಗಳೂರಿನ ಯೆಯ್ಯಾಡಿಯ ಆಕ್ಸಿಸ್ ಬ್ಯಾಂಕ್ ಕರೆನ್ಸಿ ಚೆಸ್ಟ್ ನಿಂದ 7.5 ಕೋಟಿ ರು. ಹಣವನ್ನು ಬೆಂಗಳೂರಿನ ಕೋರಮಂಗಲಕ್ಕೆ ವಾಹನದಲ್ಲಿ ಸಾಗಿಸುವ ವೇಳೆ ಹಣ ಕದ್ದು ಪರಾರಿಯಾದ ಘಟನೆಗೆ ಸಂಬಂಧಿಸಿ ಪೊಲೀಸರು ಮಂಗಳವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೇರಿದೆ. ಬಂಧಿತರನ್ನು ಮಡಕೇರಿ ಸೋಮವಾರಪೇಟೆ ತಾಲೂಕಿನ ಸುರ್ಲಾಬಿ ನಿವಾಸಿ ರವಿ ಯಾನೆ ರವೀಂದ್ರ (42), ಮನು ಯಾನೆ ಮನೀಶ್ (45) ಎಂದು ಗುರುತಿಸಲಾಗಿದೆ
ಮಂಗಳೂರಿನ ಯೆಯ್ಯಾಡಿಯಲ್ಲಿರುವ ಆಕ್ಸಿಸ್ ಬ್ಯಾಂಕ್ನ ಕರೆನ್ಸಿ ಚೆಸ್ಟ್ ನಿಂದ ಬೆಂಗಳೂರಿನ ಕೋರಮಂಗಲದ ಆಕ್ಸಿಸ್ ಬ್ಯಾಂಕ್ ಶಾಖೆಗೆ ಹಣ ಸಾಗಿಸುತ್ತಿದ್ದ ನಾಲ್ವರು ಸಿಬ್ಬಂದಿಗಳು ಹಣದ ಸಮೇತ ಮೇ 11 ಗುರುವಾರದಂದು ನಾಪತ್ತೆಯಾಗಿದ್ದರು.ಮೇ 15ರಂದು ಗನ್ ಮ್ಯಾನ್ ಟಿ.ಎ. ಪೂವಣ್ಣ, ವಾಹನ ಚಾಲಕ ಚಿತ್ರದುರ್ಗದ ಟಿ.ಪಿ.ಕರಿಬಸಪ್ಪ ಹಾಗೂ ಕೊಡಗು ಜಿಲ್ಲೆಯ ಕಾಶಿಯಪ್ಪನನ್ನು ಪೊಲೀಸರು ಬಂಧಿಸಿ 6.3 ಕೋಟಿ ರು. ಹಣ ವಶಪಡಿಸಿಕೊಳ್ಳಲಾಗಿತ್ತು.