ಮಂಗಳೂರು: ಅಂಗಡಿ ಮಾಲಕರಿಗೆ ೫ ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನ ಬಳಿ ಬುಧವಾರ ತಡರಾತ್ರಿ ನಡೆದಿದೆ.
ಪಾವೂರು ನಿವಾಸಿ ಅಬ್ದುಲ್ ರಹಿಮಾನ್ ಕೊಲೆಯತ್ನಕ್ಕೆ ಒಳಗಾದವು. ಅಬ್ಧುಲ್ ರಹಿಮಾನ್ ಪಾವೂರು ಕಡವಿನಲ್ಲಿ ಜ್ಯೂಸ್ ಅಂಗಡಿ ಹೊಂದಿದ್ದರು. ಬುಧವಾರ ರಾತ್ರಿ ಅಂಗಡಿ ಬಾಗಿಲು ಮುಚ್ಚುತ್ತಿದ್ದ ವೇಳೆ ಓಮ್ನಿ ಕಾರಿನಲ್ಲಿ ಬಂದ ಐವರ ತಂಡ ಅಬ್ದುಲ್ ಅವರ ತಲೆ, ಕಾಲು ಹಾಗೂ ಕೈ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.
ಇವರು ಸ್ಥಳೀಯವಾಗಿ ಗಾಂಜಾ ವ್ಯಸನಿಗಳ ಉಪಟಳದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರೆಂಬ ಕಾರಣಕ್ಕಾಗಿ ತಂಡ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಕುರಿತಂತೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.