Saturday 20th, April 2024
canara news

ಜ್ಯೂಸ್ ಅಂಗಡಿ ಮಾಲಕನ ಮೇಲೆ ಚೂರಿ ಇರಿತ

Published On : 25 May 2017   |  Reported By : Canaranews Network


ಮಂಗಳೂರು: ಅಂಗಡಿ ಮಾಲಕರಿಗೆ ೫ ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಕಡವಿನ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಪಾವೂರು ನಿವಾಸಿ ಅಬ್ದುಲ್ ರಹಿಮಾನ್ ಕೊಲೆಯತ್ನಕ್ಕೆ ಒಳಗಾದವು. ಅಬ್ಧುಲ್ ರಹಿಮಾನ್ ಪಾವೂರು ಕಡವಿನಲ್ಲಿ ಜ್ಯೂಸ್ ಅಂಗಡಿ ಹೊಂದಿದ್ದರು. ಬುಧವಾರ ರಾತ್ರಿ ಅಂಗಡಿ ಬಾಗಿಲು ಮುಚ್ಚುತ್ತಿದ್ದ ವೇಳೆ ಓಮ್ನಿ ಕಾರಿನಲ್ಲಿ ಬಂದ ಐವರ ತಂಡ ಅಬ್ದುಲ್ ಅವರ ತಲೆ, ಕಾಲು ಹಾಗೂ ಕೈ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

ಇವರು ಸ್ಥಳೀಯವಾಗಿ ಗಾಂಜಾ ವ್ಯಸನಿಗಳ ಉಪಟಳದ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದರೆಂಬ ಕಾರಣಕ್ಕಾಗಿ ತಂಡ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಕುರಿತಂತೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here