Friday 9th, May 2025
canara news

ಕರಾವಳಿಗೆ ಕಾಲಿಟ್ಟ ಮುಂಗಾರು ಮಳೆ

Published On : 05 Jun 2017   |  Reported By : Canaranews Network


ಮಂಗಳೂರು: ಕರಾವಳಿಗೆ ಶುಕ್ರವಾರ ಮುಂಗಾರು ಆಗಮನವಾಗಿದೆ. ಆ ಮೂಲಕ ಅಧಿಕೃತವಾಗಿ ಮಳೆಗಾಲ ಆರಂಭವಾಗಿದೆ. ದ.ಕ. ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೇ ನಿರಂತರ ಮಳೆ ಸುರಿದಿದ್ದು, ಇಳೆ ತಂಪಾಗಿದೆ. ಮಂಗಳೂರು, ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಮಳೆ ಬಂದರೂ ಶುಕ್ರವಾರ ದಿನವಿಡೀ ನಿರಂತರ ಸುರಿದಿದೆ.

ಬಿಡದೇ ಸುರಿದ ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಯಿತು. ಅಲ್ಲಲ್ಲಿ ರಸ್ತೆಯಲ್ಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು ತಿಳಿಯದೇ, ದ್ವಿಚಕ್ರ ವಾಹನ ಸವಾರರಿಗೆ ಸಮಸ್ಯೆಯಾಯಿತು. ನಂತೂರು ಬಳಿ ರಸ್ತೆ ಬದಿ ನೀರು ತುಂಬಿಕೊಂಡ ಹೊಂಡದೊಳಗೆ ರಿಕ್ಷಾವೊಂದು ಹೂತು ಹೋಗಿ ಚಾಲಕ ಪರದಾಡುವಂತಾಯಿತು.ಬೆಳ್ತಂಗಡಿ, ಸುಳ್ಯ, ಮೂಡಬಿದಿರೆಯಲ್ಲಿ ಸಣ್ಣ ಪ್ರಮಾಣದ ಮಳೆ ಬಂದಿದೆ. ಬಂಟ್ವಾಳದಲ್ಲಿ ಆಗಾಗ ಗಾಳಿ ಸಹಿತ ಸಾಧಾರಣ ಮಳೆ ಸುರಿದಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here