Tuesday 30th, April 2024
canara news

ಕರಾವಳಿಗೆ ಕಾಲಿಟ್ಟ ಮುಂಗಾರು ಮಳೆ

Published On : 05 Jun 2017   |  Reported By : Canaranews Network


ಮಂಗಳೂರು: ಕರಾವಳಿಗೆ ಶುಕ್ರವಾರ ಮುಂಗಾರು ಆಗಮನವಾಗಿದೆ. ಆ ಮೂಲಕ ಅಧಿಕೃತವಾಗಿ ಮಳೆಗಾಲ ಆರಂಭವಾಗಿದೆ. ದ.ಕ. ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೇ ನಿರಂತರ ಮಳೆ ಸುರಿದಿದ್ದು, ಇಳೆ ತಂಪಾಗಿದೆ. ಮಂಗಳೂರು, ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಮಳೆ ಬಂದರೂ ಶುಕ್ರವಾರ ದಿನವಿಡೀ ನಿರಂತರ ಸುರಿದಿದೆ.

ಬಿಡದೇ ಸುರಿದ ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಯಿತು. ಅಲ್ಲಲ್ಲಿ ರಸ್ತೆಯಲ್ಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು ತಿಳಿಯದೇ, ದ್ವಿಚಕ್ರ ವಾಹನ ಸವಾರರಿಗೆ ಸಮಸ್ಯೆಯಾಯಿತು. ನಂತೂರು ಬಳಿ ರಸ್ತೆ ಬದಿ ನೀರು ತುಂಬಿಕೊಂಡ ಹೊಂಡದೊಳಗೆ ರಿಕ್ಷಾವೊಂದು ಹೂತು ಹೋಗಿ ಚಾಲಕ ಪರದಾಡುವಂತಾಯಿತು.ಬೆಳ್ತಂಗಡಿ, ಸುಳ್ಯ, ಮೂಡಬಿದಿರೆಯಲ್ಲಿ ಸಣ್ಣ ಪ್ರಮಾಣದ ಮಳೆ ಬಂದಿದೆ. ಬಂಟ್ವಾಳದಲ್ಲಿ ಆಗಾಗ ಗಾಳಿ ಸಹಿತ ಸಾಧಾರಣ ಮಳೆ ಸುರಿದಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here