ಮಂಗಳೂರು: ಉಳ್ಳಾಲದಲ್ಲಿ ಮುಳುಗುತ್ತಿದ್ದ ಬಾರ್ಜ್ ನಲ್ಲಿದ್ದ ಎಲ್ಲಾ 27 ಜನರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಹಾಗೂ ಕಾವಲು ಪಡೆಗೆ ಸರಕಾರ ಹಾಗೂ ಜಿಲ್ಲಾಡಳಿತದ ಪರವಾಗಿ ಸಚಿವ ಯು.ಟಿ.ಖಾದರ್ ಅಭಿನಂದನೆ ಸಲ್ಲಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳ್ಳಾಲದ ಮೊಗವೀರಪಟ್ನದಲ್ಲಿ ನಡೆದ ಬಾರ್ಜ್ ಅಪಘಾತಕ್ಕೆ ಕಂಪನಿಯೇ ನೇರ ಕಾರಣ.
ಈ ಬಗ್ಗೆ ತನಿಖೆಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಕೋಸ್ಟ್ ಗಾರ್ಡ್ ಅಧಿಕಾರಿ ಡಿಸಿಲ್ಲ ಮಾತನಾಡಿ, "ಯಾರಿಗೂ ಮಾಹಿತಿ ನೀಡದೆ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಕಂಪೆನಿ ಕಾಮಗಾರಿ ನಡೆಸಿತ್ತು. ಕಳೆದ ರಾತ್ರಿ ಪರಿಸ್ಥಿತಿ ಕಾರ್ಯಾಚರಣೆಗೆ ಸೂಕ್ತವಾಗಿರಲಿಲ್ಲ. ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದರೂ ಮುಂಜಾನೆ 5 ಗಂಟೆಯಿಂದ 8 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಲಾಗಿದೆ," ಎಂದರು.