Monday 29th, April 2024
canara news

ದೆಹಲಿಯಲ್ಲಿ ರಾಷ್ಟ್ರೀಯ ಆರ್‍ಸೆಟಿ ದಿನಾಚರಣೆ ದೇಶದ ರಾಜಧಾನಿ ದೆಹಲಿಯಲ್ಲಿ ಬುಧವಾರ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಆರ್‍ಸೆಟಿ ದಿನ ಆಚರಿಸಲಾಯಿತು.

Published On : 08 Jun 2017   |  Reported By : Rons Bantwal


ಈ ಸಂದರ್ಭದಲ್ಲಿ ಆರ್‍ಸೆಟಿಗಳ ರಾಷ್ಟ್ರಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರುಡ್‍ಸೆಟ್‍ಗಳ ಸ್ಥಾಪನೆಯ ಉದ್ದೇಶ ಹಾಗೂ ಬೆಳವಣಿಗೆ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ನಾವು ಉಜಿರೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದ ರುಡ್‍ಸೆಟ್ ಸಂಸ್ಥೆಯ ಕಾರ್ಯ ವೈಖರಿಯನ್ನು ಮೆಚ್ಚಿ ಕೇಂದ್ರ ಸರ್ಕಾರದ ಗ್ರಾಮೀಣ ಮಂತ್ರಾಲಯದವರು ರುಡ್‍ಸೆಟ್ ಮಾದರಿಯ ಸಂಸ್ಥೆಗಳನ್ನು ಆರ್‍ಸೆಟಿ ಹೆಸರಿನಲ್ಲಿ ದೇಶಾದ್ಯಾಂತ ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ ಪ್ರಾರಂಭಿಸಲು ಅನುವು ಮಾಡಿದರು. ಈವರೆಗೆ ದೇಶಾದ್ಯಾಂತ ಇರುವ 587 ಆರ್‍ಸೆಟಿಗಳಿಂದ 23 ಲಕ್ಷ ಗ್ರಾಮೀಣ ಯುವಕ-ಯುವತಿಯರಿಗೆ ತರಬೇತಿ ನೀಡಲಾಗಿದೆ. ಇವರಲ್ಲಿ 13.50 ಲಕ್ಷ ಜನ ಯಶಸ್ವಿಯಾಗಿ ಸ್ವ-ಉದ್ಯೋಗ ಮಾಡುತ್ತಿದ್ದಾರೆ. ಅಲ್ಲದೆ ಹಲವಾರು ನಿರುದ್ಯೋಗಿಗಳಿಗೆ ಅವರೇ ಉದ್ಯೋಗವನ್ನು ಕೊಟ್ಟಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿದ್ದು, ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ವಲಸೆ ಹೋಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಎಲ್ಲಾ ಸಾಧನೆಗಳನ್ನು ನೋಡಿ ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮಂತ್ರಾಲಯವು ಆರ್‍ಸೆಟಿಗಳ ಶ್ರೇಷ್ಠತಾ ಕೇಂದ್ರ (NACER)ಎಂಬ ಹೆಸರಿನ ಸಂಸ್ಥೆಯನ್ನು ಪ್ರಾರಂಭಿಸಿದ್ದು ಅದರ ಪ್ರಗತಿಯನ್ನು ಶ್ಲಾಘಿಸಿದರು. ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಯುವಕ -ಯುವತಿಯರಿಗೆ ತರಬೇತಿ ನೀಡುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಆರ್‍ಸೆಟಿಗಳು ಶ್ರಮಿಸುತ್ತವೆ ಎಂದು ಹೆಗ್ಗಡೆಯವರು ಭರವಸೆ ನೀಡಿದರು.

ಭಾರತ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಸಚಿವರಾದ ಸನ್ಮಾನ್ಯ ಶ್ರೀ ನರೇಂದ್ರ ಸಿಂಗ್ ಕೋಮರ್, ರಾಜ್ಯ ಸಚಿವರಾದ ಸನ್ಮಾನ್ಯ ರಾಮ್ ಕೃಪಾಲ್ ಯಾಧವ್ ಹಾಗೂ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ರಾಜ್ಯ ಸಚಿವರಾದ ಸನ್ಮಾನ್ಯ ಸಂತೋಷ್ ಕುಮಾರ್ ಗ್ಯಾಂಗ್‍ವಾರ್‍ರವರು ಉಪಸ್ಥಿತರಿದ್ದು ಆರ್‍ಸೆಟಿಗಳು ಗ್ರಾಮೀಣ ಜನರಿಗೆ ನೀಡುತ್ತಿರುವ ತರಬೇತಿಯನ್ನು ಶ್ಲಾಘಿಸಿ ಈ ಸಂಸ್ಥೆಗಳಿಗೆ ಬೇಕಾದ ಸಹಾಯವನ್ನು ನೀಡುವ ಭರವಸೆ ನೀಡಿದರು.

ಸಮಾರಂಭದಲ್ಲಿ ಬ್ಯಾಂಕುಗಳ ಹಿರಿಯ ಅಧಿಕಾರಿಗಳು, ರಾಜ್ಯಗಳ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಆರ್‍ಸೆಟಿ ನಿರ್ದೇಶಕರುಗಳು ಭಾಗವಹಿಸಿದರು. ಈ ಸಂದರ್ಭದಲ್ಲಿ ಅತ್ಯುನ್ನತ ಸಾಧನೆ ಮಾಡಿದ ರಾಜ್ಯಗಳು, ಬ್ಯಾಂಕುಗಳು, ಆರ್‍ಸೆಟಿಗಳು ಹಾಗೂ ರಾಷ್ಟ್ರೀಯ ನಿರ್ದೇಶಕರು, ರಾಷ್ಟ್ರೀಯ ಆರ್‍ಸೆಟಿ ಶ್ರೇಷ್ಠತಾ ಕೇಂದ್ರ ಹಾಗೂ ರಾಷ್ಟ್ರೀಯ ರುಡ್‍ಸೆಟ್ ಅಕಾಡೆಮಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆರ್‍ಸೆಟಿ ಸಂಸ್ಥೆಗಳಿಂದ ತರಬೇತಿ ಪಡೆದು ಯಶಸ್ವಿ ಉದ್ಯಮವನ್ನು ನಡೆಸುತ್ತಿರುವ ಐದು ಜನ ಸಾಧಕರು ತಮ್ಮ ಅನುಭವವನ್ನು ಹಂಚಿಕೊಂಡರು. ಇವರಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ದೇಶದ ಎಲ್ಲಾ ರಾಜ್ಯಗಳಿಂದ ಬಂದ 1000ಕ್ಕೂ ಹೆಚ್ಚಿನ ಪ್ರತಿನಿಧಿಗಳು ಭಾಗವಹಿಸಿದ್ದರು.

NACER ಸಂಸ್ಥೆಯಿಂದ ಹೊರ ತಂದ ವಾರ್ಷಿಕ ವರದಿ 2016-17, ಯಶೋಗಾಥೆಗಳ ಸಂಕಲನವನ್ನು ಬಿಡುಗಡೆ ಮಾಡಲಾಯಿತು.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here