ಮಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿ ಇಲ್ಲದಿದ್ದರೆ ಪ್ರತಿದಿನ ಪತ್ರಿಕಾಗೋಷ್ಠಿ ಕರೆದು ತರಾಟೆಗೆತ್ತಿಕೊಳ್ಳುವುದು ಅನಿವಾರ್ಯವಾದೀತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು ಇಲ್ಲದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ತಕ್ಕ ಬೆಲೆ ತೆರಬೇಕಾಗಬಹುದು ಸೂಕ್ಷ್ಮವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು.ಸಿದ್ದರಾಮಯ್ಯ ಆಳವಾದ ನಿದ್ರೆ ಮಾತ್ರ ಮಾಡುತ್ತಾರೆ, ಅವರು ರೈತರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ.
ನಾನು ಸಚಿವನಾಗಿದ್ದಾಗ ನಾನು ರೈತರ ಸಾಲವನ್ನು ಮನ್ನಾ ಮಾಡುವ ಪ್ರಯತ್ನ ಮಾಡಿದ್ದೇನೆ. ರೈತರ ಆತ್ಮಹತ್ಯೆಗೆ ಸಿಎಂ ಮತ್ತು ಪ್ರಧಾನಮಂತ್ರಿಯವರು ತಲೆತಗ್ಗಿಸಬೇಕು. ಮೊದಲು ನೀವು ನಿಮಗಿರುವ ಅಧಿಕಾರ ಬಳಸಿ ರೈತರ ಸಾಲ ಮನ್ನಾ ಮಾಡಿ ಎಂದು ಸಿದ್ದರಾಮಯ್ಯರಿಗೆ ಕಿವಿಮಾತು ಹೇಳಿದರು.