ಮುಂಬಯಿ, ಜೂ.16 : ದಿ.ಭಾರತ್ ಕೋ. ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಇದರ 41ನೇ ವಾರ್ಷಿಕ ಮಹಾಸಭೆಯು ಇದೇ ಜೂ.17ನೇ ಶನಿವಾರ ಸಂಜೆ 4:00 ಗಂಟೆಗೆ ಬ್ರಿಜ್ವಾಸಿ ಪ್ಯಾಲೇಸ್ ಸಭಾಗೃಹ, ಸೋನಾವಣೆ ರಸ್ತೆ, ಗೋರೆಗಾಂವ್ ಪೂರ್ವ ಇಲ್ಲಿ ನಡೆಯಲಿದೆ ಎಂದು ಬ್ಯಾಂಕ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಆಡಳಿತ ನಿರ್ದೇಶಕ ಸಿ.ಆರ್ ಮೂಲ್ಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Jaya C.Suvarna
Rohini J.Salyan
C. R Mulky
ಬ್ಯಾಂಕ್ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಲಿದೆ. ಬ್ಯಾಂಕ್ನ ಉಪ ಕಾರ್ಯಾಧ್ಯಕ್ಷೆ ನ್ಯಾ| ರೋಹಿಣಿ ಜೆ.ಸಾಲಿಯಾನ್, ಬ್ಯಾಂಕ್ನ ನಿರ್ದೇಶಕರುಗಳು ಉಪಸ್ಥಿತರಿದ್ದು ಬ್ಯಾಂಕ್ನ ಕಾರ್ಯಸಾಧನೆ, ಗತ ಸಾಲಿನ ವಾರ್ಷಿಕ ಲೆಕ್ಕಚಾರ ವರದಿ, ಲಾಭಂಶ ಪ್ರಕಟಿಸಲಿದ್ದಾರೆ ಎಂದು ಬ್ಯಾಂಕ್ನ ಉಪ ಪ್ರಧಾನ ಪ್ರಬಂಧÀಕರೂ ಹಾಗೂ ಅಭಿವೃದ್ಧಿ ಇಲಾಖಾ ಮುಖ್ಯಸ್ಥ ಮೋಹನ್ದಾಸ್ ಹೆಜ್ಮಾಡಿ ತಿಳಿಸಿದ್ದಾರೆ.