ಮಂಗಳೂರು: ದ.ಕ.ಜಿಲ್ಲೆಯ ಕಲ್ಲಡ್ಕ ಹಾಗೂ ಕನ್ಯಾನದಲ್ಲಿ ನಡೆದ ಗುಂಪು ಘರ್ಷಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿರುವ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಘಟನಾ ಸ್ಥಳಕ್ಕೆ ತೆರಳಿ ಅಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪರಿಶೀಲಿಸಿದ್ದಾರೆ.
ಘರ್ಷಣೆ ನಡೆದ ಬಂಟ್ವಾಳ ಹಾಗೂ ವಿಟ್ಲ ಪೊಲೀಸ್ ಠಾಣೆಗಳಿಗೂ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿ ಸಾಕಷ್ಟು ಮಾಹಿತಿ ಕಲೆಹಾಕಿದ್ದಾರೆ. ಅಲ್ಲದೇ, ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೂ ಭೇಟಿ ನೀಡಿ ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯ ಕಾನೂನು ಸುವ್ಯವಸ್ಥೆಯ ಬಗ್ಗೆ ಕೂಡ ಚರ್ಚೆ ನಡೆಸಿದ್ದಾರೆ.