ಮಂಗಳೂರು: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಎಸ್ ಡಿಪಿಐ ಸಂಘಟನೆಯ ಮುಖಂಡನನ್ನು ಬುಧವಾರ ದುಷ್ಕರ್ಮಿಗಳು ಮಾರಕಾಯುಧಗಳಿಂದ ಬರ್ಬರವಾಗಿ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ. 'ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಕಲಾಯಿ ಅಶ್ರಫ್ (30) ಎನ್ನುವರನ್ನು ಬೈಕಿನಲ್ಲಿ ಬಂದ ಮುಸುಕುಧಾರಿಗಳಿಂದ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.
ಪೂರ್ವ ದ್ವೇಷದಿಂದಲೆ ಕೊಲೆ ನಡೆಸಿರುವ ಶಂಕೆ ವ್ಯಕ್ತಪಡಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈಗಾಗಲೇ ಮಂಗಳೂರು ಜಿಲ್ಲೆಯ ಕಲ್ಲಡ್ಕ ಮತ್ತು ಬಂಟ್ವಾಳದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವೆ ಕೋಮು ಗಲಭೆಗಳ ನಡೆಯುತ್ತಿದ್ದು, ಮತ್ತಷ್ಟು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.