ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗೆ ಪ್ರೇರಣೆ ನೀಡುತ್ತಿರುವುದಲ್ಲದೇ, ಅಧಿಕಾರಿಗಳ ಮೂಲಕ ಹಿಂದೂ ಸಂಘಟನೆ ಹಾಗೂ ಬಿಜೆಪಿ ನಾಯಕರನ್ನು ಬಂಧಿಸಲು ಒತ್ತಡ ಹೇರುತ್ತಿರುವ ಸಚಿವ ಬಿ. ರಮಾನಾಥ ರೈ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲು ಆಗ್ರಹಿಸಿದರು.
ಆದಿತ್ಯವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಅವರು ರಾಜೀನಾಮೆ ನೀಡದಿದ್ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಮಾನಾಥ ರೈ ಅವರನ್ನು ಸಂಪುಟದಿಂದ ಕೈಬಿಡಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿ