ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ,ಬೆಳ್ತಂಗಡಿ ತಾಲೂಕುಗಳಲ್ಲಿ ಸಿಆರ್ಪಿಸಿ ಸೆಕ್ಷನ್ 144 ಅನ್ವಯ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಜೂ. 27ರ ಮಧ್ಯರಾತ್ರಿ 12 ಗಂಟೆ ತನಕ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೂ ಗುರುವಾರ ವಿಸ್ತರಿಸಲಾಗಿದೆ.
ಈ ಹಿಂದೆ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಜೂ. 14ರಿಂದ ಜೂ. 21ರ ತನಕ ವಿಸ್ತರಿಸಲಾಗಿತ್ತು. ಬುಧವಾರ ಬಂಟ್ವಾಳ ತಾಲೂಕು ಬೆಂಜನಪದವಿನಲ್ಲಿ ಅಶ್ರಫ್ ಅವರ ಕೊಲೆ ಕೃತ್ಯ ಸಂಭವಿಸಿದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು 7 ದಿನಗಳ ಕಾಲ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾಯೂ ಆದ ಡಾ| ಕೆ.ಜಿ. ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.ಜನರು ಗುಂಪು ಕೂಡುವುದನ್ನು,ಆಯುಧಗಳನ್ನು ಒಯ್ಯುವುದು, ಘೋಷಣೆ ಕೂಗುವುದು, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ