Wednesday 1st, May 2024
canara news

ಎಸ್ ಡಿಪಿಐ ಮುಖಂಡನ ಹತ್ಯೆ; ಕಲ್ಲಡ್ಕದಲ್ಲಿ ಬಿಗಿಭದ್ರತೆ

Published On : 22 Jun 2017   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಬಂಟ್ವಾಳದ ಬೆಂಜನಪದವಿನಲ್ಲಿ ಎಸ್ ಡಿಪಿಐ ಮುಖಂಡನ ಹತ್ಯೆಯಾದ ಬಳಿಕ ಉದ್ವಿಗ್ನ ವಾತಾಅರಣ ನಿರ್ಮಾಣವಾಗಿದ್ದು, ಇದರಿಂದ ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ಬಂದೋಬಸ್ತ್ ಏರ್ಪಡಿಸಲಾಗಿದ್ದು, ೧೦ ಡಿಆರ್ ಸಹಿತ ಹೆಚ್ಚುವರಿ ಕೆಎಸ್ಆರ್ ಪಿ ತುಕಡಿಗಳನ್ನು ಕರೆಸಿಕೊಳ್ಳಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಹೇಳಿದ್ದಾರೆ.

ಬಂಟ್ವಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಾತಿ, ಧರ್ಮದ ಹೆಸರಿನಲ್ಲಿ ಸಂಘಟನೆಗಳು ಶಾಂತಿ ಕಾಪಾಡಲು ಅವಕಾಶ ನೀಡಬೇಕು. ಯಾವುದೇ ಅನುಮಾನಗಳು ಇದ್ದಲ್ಲಿ ಸಂಘಟನೆಯ ಮುಖಂಡರು ತನ್ನನ್ನು ನೇರವಾಗಿ ಭೇಟಿಯಾಗಿ ಚರ್ಚೆ ನಡೆಸಲು ಮುಕ್ತ ಅವಕಾಶ ಇದೆ. ಜನರ ಆಸ್ತಿ, ಪಾಸ್ತಿ ಹಾಗೂ ಶಾಂತಿ ಕಾಪಾಡುವುದು ಪೊಲೀಸರ ಹೊಣೆಗಾರಿಕೆಯಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here