ಮುಂಬಯಿ, ಜೂ.23: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ್ ಡಿ.ಕೋಟ್ಯಾನ್ ಅವರು ಇಂದಿಲ್ಲಿ ಶುಕ್ರವಾರ ಪುತ್ತೂರು ಪಡುಮಲೆ ಅಲ್ಲಿನ ಬಡಗನ್ನೂರು ಗ್ರಾಮಕ್ಕೆ ಭೇಟಿ ನೀಡಿ ನಿರ್ಮಾಣ ಹಂತದಲ್ಲಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ್ ಬಿತ್ತ್ಲ್ ದೇಯಿ ಬೈದ್ಯೆತಿ, ಕೋಟಿ ಚೆನ್ನಯರ ಮೂಲಸ್ಥಾನ, ಆದಿದೈವ ಧೂಮಾವತಿ ಕ್ಷೇತ್ರ, ಗುರು ಸಾಯನ ಬೈದ್ಯರ ಶಕ್ತಿ ಪೀಠಗಳ ಕಾಮಗಾರಿಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶೀಘ್ರಗತಿಯಲ್ಲಿ ನಡೆಯುತ್ತಿರುವ ವಿವಿಧ ಶ್ರದ್ಧಾ ಕೇಂದ್ರಗಳ ಪುನರುತ್ಥಾನದ ಯೋಜನೆಯ ಕಾಮಗಾರಿಗಳ ಬಗ್ಗೆ ತಿಳಿದು ಹರ್ಷವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಧೂಮಾವತಿಯ ಸಾನಿಧ್ಯದಲ್ಲಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಶ್ರೀಧರ ಪೂಜಾರಿ ಪೂಜೆ ನೆರವೇರಿಸಿ ಗಂಧ-ಪ್ರಸಾದ ನೀಡಿ ಅನುಗ್ರಹಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಕಾರ್ಯಾಧ್ಯಕ್ಷ ಜಯಂತ ನಡುಬೈಲ್, ಸಿ.ಕೆ ಪೂಜಾರಿ, ತೋನ್ಸೆ ಸಂಜೀವ ಪೂಜಾರಿ ಮತ್ತಿತ್ತರರು ಉಪಸ್ಥಿತರಿದ್ದರು.