Wednesday 24th, April 2024
canara news

ಸಹಕಾರಿ ಬ್ಯಾಂಕ್ ದರೋಡೆಗೆ ವಿಫಲ ಯತ್ನ

Published On : 24 Jun 2017   |  Reported By : Canaranews Network


ಮಂಗಳೂರು: ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ನ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಹಾಡ ಹಗಲೇ ಸಿಬಂದಿಗೆ ಚೂರಿ ತೋರಿಸಿ ಶೌಚಾಲಯದಲ್ಲಿ ಕೂಡಿ ಹಾಕಿ 3.5 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಶುಕ್ರವಾರ ಮಧ್ಯಾಹ್ನ ದರೋಡೆ ನಡೆಸಿದ್ದು,

ಚಿನ್ನಾಭರಣ ಗೋಣಿ ಚೀಲದಲ್ಲಿ ತುಂಬಿಸಿ ಪರಾರಿಯಾಗುವ ಹಂತದಲ್ಲಿ ಬ್ಯಾಂಕ್ನ ಸಿಬಂದಿಯ ಕಲ್ಲಿನೇಟಿಗೆ ತತ್ತರಿಸಿದ ದರೋಡೆ ಕೋರರು ಚಿನ್ನಾಭರಣ ಬಿಟ್ಟು ಪರಾರಿಯಾದ ಘಟನೆ ನಡೆದಿದೆ.ರಾ.ಹೆ. 66ರ ಕೆ.ಸಿ.ರೋಡ್ನಲ್ಲಿ ಈ ಘಟನೆ ನಡೆದಿದೆ. ಕಲ್ಲಿನೇಟು ತಿಂದ ದರೋಡೆಕೋರರಿಬ್ಬರು ಬೈಕಿನಲ್ಲಿ ಮಂಗಳೂರು ಕಡೆ ಪರಾರಿಯಾಗಿ ದ್ದಾರೆ. ಬ್ಯಾಂಕಿನ ಚಿನ್ನಾಭರಣದ ಅಪ್ರೈಸರ್ ಆಗಿರುವ ದೇರಳಕಟ್ಟೆಯ ರಾಮಚಂದ್ರ ಅವರೇ ಕಲ್ಲಿನೇಟು ನೀಡಿ ದರೋಡೆಕೋರರ ಸಂಚನ್ನು ವಿಫಲಗೊಳಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here