ಮಂಗಳೂರು: ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ನ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಹಾಡ ಹಗಲೇ ಸಿಬಂದಿಗೆ ಚೂರಿ ತೋರಿಸಿ ಶೌಚಾಲಯದಲ್ಲಿ ಕೂಡಿ ಹಾಕಿ 3.5 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಶುಕ್ರವಾರ ಮಧ್ಯಾಹ್ನ ದರೋಡೆ ನಡೆಸಿದ್ದು,
ಚಿನ್ನಾಭರಣ ಗೋಣಿ ಚೀಲದಲ್ಲಿ ತುಂಬಿಸಿ ಪರಾರಿಯಾಗುವ ಹಂತದಲ್ಲಿ ಬ್ಯಾಂಕ್ನ ಸಿಬಂದಿಯ ಕಲ್ಲಿನೇಟಿಗೆ ತತ್ತರಿಸಿದ ದರೋಡೆ ಕೋರರು ಚಿನ್ನಾಭರಣ ಬಿಟ್ಟು ಪರಾರಿಯಾದ ಘಟನೆ ನಡೆದಿದೆ.ರಾ.ಹೆ. 66ರ ಕೆ.ಸಿ.ರೋಡ್ನಲ್ಲಿ ಈ ಘಟನೆ ನಡೆದಿದೆ. ಕಲ್ಲಿನೇಟು ತಿಂದ ದರೋಡೆಕೋರರಿಬ್ಬರು ಬೈಕಿನಲ್ಲಿ ಮಂಗಳೂರು ಕಡೆ ಪರಾರಿಯಾಗಿ ದ್ದಾರೆ. ಬ್ಯಾಂಕಿನ ಚಿನ್ನಾಭರಣದ ಅಪ್ರೈಸರ್ ಆಗಿರುವ ದೇರಳಕಟ್ಟೆಯ ರಾಮಚಂದ್ರ ಅವರೇ ಕಲ್ಲಿನೇಟು ನೀಡಿ ದರೋಡೆಕೋರರ ಸಂಚನ್ನು ವಿಫಲಗೊಳಿಸಿದರು.