Saturday 4th, May 2024
canara news

ಅಶ್ರಫ್ ಕಳಾಯಿ ಕೊಲೆ ಪ್ರಕರಣ: ಓರ್ವ ಪ್ರಮುಖ ಆರೋಪಿ ಪೊಲೀಸ್ ವಶ

Published On : 28 Jun 2017   |  Reported By : Canaranews Network


ಮಂಗಳೂರು: ಮಹಮದ್ ಅಶ್ರಫ್ ಕಳಾಯಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಪ್ರಮುಖ ಇಬ್ಬರು ಆರೋಪಿಗಳಲ್ಲಿ ಒಬ್ಬನಾಗಿರುವ ದಿವ್ಯರಾಜ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

5 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಮುಖ ಆರೋಪಿಗಳಾದ ದಿವ್ಯರಾಜ್ ಶೆಟ್ಟಿ ಮತ್ತು ಭರತ್ ಕುಮ್ದೇಲು ಅವರು ಬಂಧನಕ್ಕೆ ಬಾಕಿ ಇದ್ದಾರೆ ಎಂದು ಶನಿವಾರ ಐಜಿಪಿ ಪಿ.ಹರಿಶೇಖರನ್ ತಿಳಿಸಿದ್ದರು.ಬಂಧಿತ ಆರೋಪಿಗಳಾದ ಪವನ್ ಕುಮಾರ್ ಯಾನೆ ಪುಂಡ, ರಂಜಿತ್, ಸಂತೋಷ್ ಯಾನೆ ಸಂತು, ಶಿವ ಪ್ರಸಾದ್ ಯಾನೆ ಶಿವು ಮತ್ತು ಅಭಿನ್ ರೈ ಯಾನೆ ಅಭಿ (23) ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿ ಬಳಿಕ ಹೆಚ್ಚಿನ ವಿಚಾರಣೆಗಾಗಿ ಬಂಟ್ವಾಳ ಪೊಲೀಸರ ಕಸ್ಟಡಿಗೆ ಒಪ್ಪಿಸಲಾಗಿದೆ. ಪೊಲೀಸರು ಈ ಆರೋಪಿಗಳನ್ನು ರಹಸ್ಯ ತಾಣದಲ್ಲಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here