Friday 29th, March 2024
canara news

"ಜಿಲ್ಲೆಯಲ್ಲಿ ಹಿಂದು - ಮುಸ್ಲಿಂ ಗಲಾಟೆ ಎಬ್ಬಿಸುವುದೇ ರಮಾನಾಥ ರೈ”: ಹರಿಕೃಷ್ಣ ಬಂಟ್ವಾಳ ವಾಗ್ದಾಳಿ

Published On : 28 Jun 2017   |  Reported By : Canaranews Network


ಮಂಗಳೂರು: ಜಿಲ್ಲೆಯಲ್ಲಿ ಹಿಂದು - ಮುಸ್ಲಿಂ ಗಲಾಟೆ ಎಬ್ಬಿಸುವುದೇ ರಮಾನಾಥ ರೈ ಎಂದು ಮಾಜಿ ಕಾಂಗ್ರೆಸ್ ನಾಯಕ ಹರಿಕೃಷ್ಣ ಬಂಟ್ವಾಳ್ ವಾಗ್ದಾಳಿ ನಡೆಸಿದ್ದಾರೆ. ರಮಾನಾಥ ರೈ ವಿರುದ್ಧ ಕೆಂಡಕಾರಿರುವ ಹರಿಕೃಷ್ಣ, "ಜನಾರ್ದನ ಪೂಜಾರಿಯವರು ಕಾಂಗ್ರೆಸ್ ಪಕ್ಷದ ಹಿರಿಯ ವ್ಯಕ್ತಿ. ಇಂಥ ವ್ಯಕ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹೀನಾಯವಾಗಿ ಬೈದಿದ್ದಾರೆ.

ಮದುವೆ ಸಮಾರಂಭದಲ್ಲಿ ಸಾರ್ವಜನಿಕವಾಗಿ ತೆಗಳಿದ್ದಾರೆ. ರಮಾನಾಥ ರೈಯನ್ನು 1985ರಲ್ಲಿ ಟಿಕೆಟ್ ಕೊಟ್ಟು ಶಾಸಕರಾಗಿಸಿದ್ದು ಪೂಜಾರಿ. ಆಸ್ಕರ್ ಫೆರ್ನಾಂಡಿಸ್ ಆಗಲೀ ವೀರಪ್ಪ ಮೊಯ್ಲಿಯಾಗಲಿ ಅವರನ್ನು ಶಾಸಕರಾಗಿಸಿದ್ದಲ್ಲ. ಈಗ ಹಣ ಆಗಿರಬಹುದು. ಅಧಿಕಾರದ ಅಹಂಕಾರದಿಂದ ಮಾತನಾಡಿದ್ದಾರೆ. ಇಂಥ ಕೀಳು ಭಾಷೆ ಬಳಸಿದ ರಮಾನಾಥ ರೈಯನ್ನು ಪಕ್ಷದಿಂದ ಕಿತ್ತು ಹಾಕಬೇಕು ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here