ಮಂಗಳೂರು: ರಾಜ್ಯದ ನಾಲ್ಕು ಕಡೆಗಳಲ್ಲಿ ಕ್ರೈಸ್ತರ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ'ಸೋಜಾ ತಿಳಿಸಿದ್ದಾರೆ.ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಕ್ರೈಸ್ತ ಸಮುದಾಯದ ಯುವಕ-ಯುವತಿಯರಿಗೆ ಐಎಎಸ್, ಕೆಎಎಸ್ನಂತಹ ತರಬೇತಿ ನೀಡುವ ನಿಟ್ಟಿನಲ್ಲಿ ಈ ಕೇಂದ್ರಗಳನ್ನು ತೆರೆಯುವ ಯೋಜನೆಯಿದೆ.
ಆದರೆ ಯಾವ ಜಿಲ್ಲೆಗಳಲ್ಲಿ ಎಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಿದೆ ಎಂದರು.ಕ್ರೈಸ್ತ ಸಮುದಾಯದವರಿಗಾಗಿಯೇ ಸರಕಾರ ವಿವಿಧ ಯೋಜನೆಗಳನ್ನು ಕೈಗೊಂಡಿದೆ. ಸ್ವ ಉದ್ಯೋಗಕ್ಕಾಗಿ 5-7 ಲಕ್ಷ ರೂ. ಟ್ಯಾಕ್ಸಿ ಖರೀದಿ ಮಾಡಿದರೆ 3 ಲಕ್ಷ ರೂ. ಸಬ್ಸಿಡಿ ದೊರೆಯುತ್ತದೆ. ಪಶುಸಂಗೋಪನೆ ಉದ್ಯೋಗ ಮಾಡುವ ಮಹಿಳೆಯರಿಗೆ ಶೇ. 50ರಷ್ಟು ಸಹಾಯಧನ ಸೇರಿ 40,000 ರೂ.ಗಳ ಘಟಕ ವೆಚ್ಚದಲ್ಲಿ ಸಹಾಯ ನೀಡಲಾಗುತ್ತದೆ. ಇನ್ನೂ ಅನೇಕ ಯೋಜನೆಗಳನ್ನು ಸಮುದಾಯಕ್ಕಾಗಿಯೇ ಮೀಸಲಿಡಲಾಗಿದೆ ಎಂದರು.