Saturday 10th, May 2025
canara news

ಕಂಬಳಕ್ಕೆ ಹಸಿರು ನಿಶಾನೆ

Published On : 04 Jul 2017   |  Reported By : Canaranews Network


ಮಂಗಳೂರು: ಕರಾವಳಿ ಭಾಗದ ಜನಪದ ಕ್ರೀಡೆ ಕಂಬಳ ಆಯೋಜನೆ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಅಧ್ಯಾದೇಶಕ್ಕೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

ಇದರೊಂದಿಗೆ ಕಂಬಳ ಆಯೋಜನೆಗೆ ಎದುರಾಗಿದ್ದ ತೊಡಕಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ಮುಂದಿನ 6 ತಿಂಗಳ ಅವಧಿಯಲ್ಲಿ ಕಂಬಳ ನಡೆಸಲು ಅಧಿಕೃತ ಅನುಮತಿ ಲಭಿಸಿದೆ. ರಾಜ್ಯದಲ್ಲಿ ತುರ್ತಾಗಿ ಕಂಬಳ ಆಯೋಜಿಸಲು ಕಾನೂನಿನಡಿ ಅನುಮತಿ ನೀಡುವ ಉದ್ದೇಶದಿಂದ ಸರಕಾರವು ತುರ್ತಾಗಿ ಅಧ್ಯಾದೇಶ ಮಾಡಿ ರಾಜ್ಯ ಪಾಲರ ಮೂಲಕ ಕೇಂದ್ರಸರಕಾರಕ್ಕೆ ಕಳುಹಿಸಿತ್ತು. ಈ ಅಧ್ಯಾದೇಶಕ್ಕೆ ರಾಷ್ಟ್ರಪತಿಗಳ ಅನುಮತಿಯೊಂದಿಗೆ ಗೃಹ ಸಚಿವಾಲಯ ಆದೇಶವನ್ನು ಹೊರಡಿಸಿ ಅದನ್ನು ಕರ್ನಾಟಕ ಸರಕಾರದ ಸಂಸದೀಯ ಕಾರ್ಯದರ್ಶಿಗೆ ರವಾನಿಸಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here