Saturday 10th, May 2025
canara news

ರೈ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ: ಹರಿಕೃಷ್ಣ

Published On : 05 Jul 2017   |  Reported By : Canaranews Network


ಮಂಗಳೂರು: ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ವಿರುದ್ಧ ಸಚಿವ ರಮಾನಾಥ ರೈ ಅವರು ಅವಹೇಳನಕಾರಿಯಾಗಿ ಮಾತನಾಡಿಲ್ಲ ಎಂದಾದರೆ ವಾರದೊಳಗೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಹರಿಕೃಷ್ಣ ಬಂಟ್ವಾಳ ಸವಾಲು ಹಾಕಿದ್ದಾರೆ.ಅವರು ಮಂಗಳವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನಾನು ಮಾಡಿರುವ ಆರೋಪ ನಿರಾಧಾರ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ನಾನು ಮಾಡಿರುವ ಆರೋಪಕ್ಕೆ ನನ್ನ ಬಳಿ ದಾಖಲೆ ಇದೆ. ಪೂಜಾರಿ ಅವರ ಬಗ್ಗೆ ಸಚಿವ ರೈ ಅವರು ಯಾರ ಬಳಿ ಅವಮಾನಕರವಾಗಿ ಮಾತನಾಡಿದ್ದಾರೆಯೋ ಅವರನ್ನೂ ಕರೆತರುತ್ತೇನೆ. ರೈ ಅವರಿಗೆ ನೈತಿಕತೆ, ಪ್ರಾಮಾಣಿಕತೆ ಮತ್ತು ಅವರೇ ಹೇಳಿದಂತೆ ಪೂಜಾರಿ ಅವರ ಮೇಲೆ ಗೌರವ ಇದ್ದಲ್ಲಿ ಧರ್ಮಸ್ಥಳಕ್ಕೆ ಬಂದು ಅಣ್ಣಪ್ಪ ಸ್ವಾಮಿ ಮತ್ತು ಮಂಜುನಾಥ ಸ್ವಾಮಿಯ ಎದುರು ಪ್ರಮಾಣ ಮಾಡಲಿ ಎಂದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here