Thursday 25th, April 2024
canara news

ರೈ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ: ಹರಿಕೃಷ್ಣ

Published On : 05 Jul 2017   |  Reported By : Canaranews Network


ಮಂಗಳೂರು: ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ವಿರುದ್ಧ ಸಚಿವ ರಮಾನಾಥ ರೈ ಅವರು ಅವಹೇಳನಕಾರಿಯಾಗಿ ಮಾತನಾಡಿಲ್ಲ ಎಂದಾದರೆ ವಾರದೊಳಗೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಹರಿಕೃಷ್ಣ ಬಂಟ್ವಾಳ ಸವಾಲು ಹಾಕಿದ್ದಾರೆ.ಅವರು ಮಂಗಳವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನಾನು ಮಾಡಿರುವ ಆರೋಪ ನಿರಾಧಾರ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ನಾನು ಮಾಡಿರುವ ಆರೋಪಕ್ಕೆ ನನ್ನ ಬಳಿ ದಾಖಲೆ ಇದೆ. ಪೂಜಾರಿ ಅವರ ಬಗ್ಗೆ ಸಚಿವ ರೈ ಅವರು ಯಾರ ಬಳಿ ಅವಮಾನಕರವಾಗಿ ಮಾತನಾಡಿದ್ದಾರೆಯೋ ಅವರನ್ನೂ ಕರೆತರುತ್ತೇನೆ. ರೈ ಅವರಿಗೆ ನೈತಿಕತೆ, ಪ್ರಾಮಾಣಿಕತೆ ಮತ್ತು ಅವರೇ ಹೇಳಿದಂತೆ ಪೂಜಾರಿ ಅವರ ಮೇಲೆ ಗೌರವ ಇದ್ದಲ್ಲಿ ಧರ್ಮಸ್ಥಳಕ್ಕೆ ಬಂದು ಅಣ್ಣಪ್ಪ ಸ್ವಾಮಿ ಮತ್ತು ಮಂಜುನಾಥ ಸ್ವಾಮಿಯ ಎದುರು ಪ್ರಮಾಣ ಮಾಡಲಿ ಎಂದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here