ಮಂಗಳೂರು: ಅಶ್ರಫ್ ಕೊಲೆ ಪ್ರಕರಣದ ರೂವಾರಿಗಳಾದ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಶರಣ್ ಪಂಪ್ವೆಲ್ ಅವರನ್ನು ಜುಲೈ 15ರೊಳಗೆ ಬಂಧಿಸಬೇಕು. ಇಲ್ಲದಿದ್ದರೆ ಜು.15ರಂದು 'ಕಲ್ಲಡ್ಕ ಚಲೋ' ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಜಿಲ್ಲೆಯಲ್ಲಿ ನಡೆದ ಹೆಚ್ಚಿನ ಎಲ್ಲಾ ಘಟನೆಗಳಲ್ಲಿ ಬಂಧಿತರಾದ ಬಹುತೇಕರು ಆರ್ಎಸ್ಎಸ್ ಮುಖಂಡ ಪ್ರಭಾಕರ್ ಭಟ್ಟರ ಆಪ್ತರು. ಆದ್ದರಿಂದ ಪ್ರಭಾಕರ್ ಹಾಗೂ ಶರಣ್ ಅವರನ್ನು ಕೂಡಲೇ ಬಂಧಿಸಬೇಕು," ಎಂದರು.