ಮಂಗಳೂರು: ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಕೊಡಗು ಜಿಲ್ಲೆಯಲ್ಲಿ ಮಾಡಿರುವ ಅಕ್ರಮ ಆಸ್ತಿ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಬೇಕು ಎಂದು ಸಚಿವ ರಮಾನಾಥ್ ರೈ ಆಗ್ರಹಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಕುಮ್ಮಕ್ಕು ನೀಡುತ್ತಿರುವ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಜಾರಿ ನಿರ್ದೇಶನಾಲಯದಿಂದ ತನಿಖೆ ಆಗಬೇಕು ಅವರು ಒತ್ತಾಯಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡಲು ಈ ಇಬ್ಬರು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.