Saturday 10th, May 2025
canara news

'ದಕ್ಷಿಣ ಕನ್ನಡದಲ್ಲಿ ಸಂಘರ್ಷ, ಕೇಂದ್ರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವೆ';ಡಿವಿಎಸ್

Published On : 12 Jul 2017   |  Reported By : Canaranews Network


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಅಶಾಂತಿಯಿಂದ ದೇಶಕ್ಕೆ ತಪ್ಪು ಸಂದೇಶ ಹೋಗುತ್ತಿದೆ, ಆಡಳಿತದ ದುರಹಂಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಬಲಿಯಾಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಆರೋಪಿಸಿದರು. ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ದಕ್ಷಿಣ ಕನ್ನಡ ಜಿಲ್ಲೆಯ ಸಂಘರ್ಷದ ಬಗ್ಗೆ ಕೇಂದ್ರ ಕ್ಯಾಬಿನೆಟ್ ಮುಂದೆ ಇಡುತ್ತೇನೆ.

ಇವತ್ತು ಜಿಲ್ಲಾಧಿಕಾರಿಗಳೊಡನೆ ಸಭೆ ಮಾಡಿದ್ದು, ಸಭೆಯ ವರದಿಯನ್ನು ಕೇಂದ್ರ ಗೃಹಸಚಿವಾಲಯದ ಗಮನಕ್ಕೆ ತರುತ್ತೇನೆ" ಎಂದರು.ಬಂಟ್ವಾಳ, ಉಳ್ಳಾಲ ಎರಡು ಪ್ರದೇಶ ಬಿಟ್ಟರೆ ಬೇರೆ ಎಲ್ಲೂ ಅಹಿತಕರ ಘಟನೆ ನಡೆದಿಲ್ಲ. ಆದ್ರೆ ಇಡೀ ಜಿಲ್ಲೆಗೆ ಇದನ್ನು ವ್ಯಾಪಿಸುವ ಹುನ್ನಾರ ನಡೆಯುತ್ತಿದೆ. ಒಂದೂವರೆ ತಿಂಗಳಿನಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ಇದೆ. ರಮಾನಾಥ ರೈ, ಯುಟಿ ಖಾದರ್ ರಿಂದ ಜಿಲ್ಲೆಗೆ ಅಪಮಾನ ಎಂದು ವಾಗ್ದಾಳಿ ನಡೆಸಿದರು. ಜಿಲ್ಲೆಯಲ್ಲಾಗುತ್ತಿರುವ ಘಟನೆಗಳಿಗೆ ರಮಾನಾಥ ರೈ, ಯುಟಿ ಖಾದರ್ ನೇರ ಹೊಣೆ ಎಂದು ಆರೋಪಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here