ಮಂಗಳೂರು: ಕೊಲೆಯಾದ ಶರತ್ ಮನೆಗೆ ಭೇಟಿ ಕೊಡುವ ಉದ್ದೇಶದಿಂದ ನಾನು ಮಂಗಳೂರಿಗೆ ಬಂದಿದ್ದೇನೆ. ಇದು ವ್ಯವಸ್ಥಿತ ಕೊಲೆ ಸಂಚು. ಸಿಎಂ ಕಾರ್ಯಕ್ರಮಕ್ಕಾಗಿ ಸಾವನ್ನು ಮುಚ್ಚಿಟ್ಟಿದ್ದು ಅಕ್ಷಮ್ಯ ಅಪರಾಧವೆಂದು ಬಿಎಸ್ವೈ ವಾಗ್ದಾಳಿ ನಡೆಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಶರತ್ ಹತ್ಯೆ ನಡೆದು 9 ದಿನ ಆದ ಮೇಲೆ ಯಾರಿಗೂ ಹೇಳದೇ ರಮಾನಾಥ ರೈ ಶರತ್ ಮನೆಗೆ ಹೋಗಿದ್ದರು. ನಾವೆಲ್ಲಾ ಬಂದ ಮೇಲೆ ಅವರಿಗೆ ಜ್ಞಾನೋದಯ ಆಗಿದೆ. ಅದು ಅವರ ವಯಸ್ಸಿನ ಕಾರಣವೋ, ಉದ್ದೇಶ ಪೂರ್ವಕವೋ ಗೊತ್ತಿಲ್ಲ. ರಾಜಕಾರಣಿಗಳ ಶಬ್ದ ಪ್ರಯೋಗದ ಬಗ್ಗೆ ನಾನು ಪ್ರತಿಕ್ರಿಯಿಸಲು ಇಷ್ಟಪಡಲ್ಲ," ಎಂದರು.