ಮಂಗಳೂರು: ಶರತ್ ಮಡಿವಾಳ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವ ಅಗತ್ಯವಿಲ್ಲ ಎಂದು ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ.
ಸೋಮವಾರ ಮಂಗಳೂರು ಕೋರ್ಟ್ ಗೆ ಹಾಜರಾಗುವ ಸಂದರ್ಭ ಮಾಧ್ಯಮ ಪ್ರತಿನಿದಿಗಳ ಜೊತೆಗೆ ಮಾತನಾಡಿದ ಅವರು, "ಶರತ್ ಮಡಿವಾಳ ಹತ್ಯೆಯ ತನಿಖೆಯನ್ನು ಎನ್ಐಎಗೆ ಒಪ್ಪಿಸುವ ಅಗತ್ಯ ಇಲ್ಲ. ನಮ್ಮ ರಾಜ್ಯದ ಪೊಲೀಸರು ಸಮರ್ಥರಿದ್ದಾರೆ," ಎಂದರು."ಕರಾವಳಿ ಜಿಲ್ಲೆಯಲ್ಲಿ ಭಯದ ವಾತಾವರಣ ಇಲ್ಲ. ದೊಂಬಿಯಾಗುತ್ತಿದೆ ಅಂತಾ ವಿನಾಕಾರಣ ಬಿಂಬಿಸಲಾಗುತ್ತಿದೆ ಹೊರತು ಜಿಲ್ಲೆಯಲ್ಲಿ ಯಾವುದೇ ರೀತಿಯ ಭಯದ ವಾತಾವರಣ ಕಾಣುತ್ತಿಲ್ಲ," ಎಂದರು.