ಮುಂಬಯಿ, ಜು.19: ತೀಯಾ ಸಮಾಜ ಮುಂಬಯಿ ವಿಶ್ವಸ್ಥ ಮಂಡಳಿ ಕಾರ್ಯಾಧ್ಯಕ್ಷ ರೋಹಿದಾಸ್ ಎಸ್.ಬಂಗೇರ ಅವರ ಸುಪುತ್ರ ಮಹೇಶ್ ಆರ್.ಬಂಗೇರಾ(50.) ಕಳೆದ ಸೋಮವಾರ (17.07.2017) ಮಂಗಳೂರಿನ ಲಾಲ್ಬಾಗ್ನಲ್ಲಿರುವ ಸ್ವನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಎರಡು ಹೆಣ್ಣು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಮಹೇಶ್ ಬಂಗೇರಾ ಅವರ ನಿಧನಕ್ಕೆ ತೀಯಾ ಸಮಾಜದ ಅಧ್ಯಕ್ಷ ಚಂದ್ರಶೇಖರ ಆರ್.ಬೆಳ್ಚಡ, ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ.