Saturday 10th, May 2025
canara news

ಮಂಗಳೂರಲ್ಲಿ ಎಎಸ್ಐ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ರೌಡಿ

Published On : 22 Jul 2017   |  Reported By : Canaranews network


ಮಂಗಳೂರು: ಮಂಗಳೂರಿನ ಪಣಂಬೂರು ಠಾಣೆಯ ಎಎಸ್ಐ ಮೇಲೆ ರೌಡಿಯೋರ್ವ ಕಾರು ಚಲಾಯಿಸಿ ಕೊಲೆಗೆ ಯತ್ನಿಸಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ರೌಡಿಶೀಟರ್ ಹ್ಯಾರಿಸ್ ಈ ಕೃತ್ಯ ಎಸಗಿದ್ದಾನೆ. ಈ ಅಪಘಾತದಲ್ಲಿ ಪಣಂಬೂರು ಠಾಣೆ ಎಎಸ್ಐ ಪುರಂದರ ಗೌಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹ್ಯಾರೀಸ್ ದರೋಡೆಗೆ ಸಂಚು ರೂಪಿಸಿದ್ದ ವಿಚಾರ ತಿಳಿದ ಪಣಂಬೂರು ಪೊಲೀಸರು ಎರಡು ತಂಡಗಳಾಗಿ ಮಂಗಳೂರಿನ ಕಸಬಾ ಬೆಂಗ್ರೆಯಲ್ಲಿ ರೌಡಿಶೀಡರ್ ಹ್ಯಾರೀಸ್ ನನ್ನು ಹಿಡಿಯಲು ಹೊಂಚು ಹಾಕಿದ್ದರು. ಈ ವೇಳೆ ಸಾಗಿಬಂದ ಹ್ಯಾರಿಸ್ ಕಾರನ್ನು ನಿಲ್ಲಿಸಲು ಸೂಚಿಸಿದಾಗ ಆತ ನೇರವಾಗಿ ಎಎಸ್ಐಗೆ ಮೇಲೆ ಕಾರನ್ನು ಹಾಯಿಸಲು ಯತ್ನಿಸಿದ್ದಾನೆ.ಇದರಿಂದ ಎಎಸ್ಐ ಪುರಂದರ ಗೌಡರಿಗೆ ಗಾಯವಾಗಿದ್ದು ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಅವರೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹದಿನೈದಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರುವ ಹ್ಯಾರಿಸ್ ವಿರುದ್ಧ ಇದೀಗ ಪಣಂಬೂರು ಠಾಣೆಯಲ್ಲಿ ಕೊಲೆಯತ್ನ ದೂರು ದಾಖಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here