ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತೀ ಠಾಣೆಗೆ ಕನಿಷ್ಠ ಆರು ಮಂದಿಯಂತೆ ನೂರು ಮಂದಿ ಹೆಚ್ಚುವರಿ ಸಿಬಂದಿ ನಿಯೋಜಿಸಲಾಗುವುದು. ಈ ಮೂಲಕ ಕಾನೂನು ಸುವ್ಯವಸ್ಥೆ ಬಲಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ಅವರು ಶನಿವಾರ ಬಂಟ್ವಾಳ ರೋಟರಿ ಕ್ಲಬ್ನಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಗ್ರಾಮಗಸ್ತು ಸಭೆಯಲ್ಲಿ ಸಾರ್ವಜನಿಕರ ಅಭಿಪ್ರಾಯ ಸ್ವೀಕರಿಸಿ ಮಾತನಾಡಿದರು.ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣಾ ವ್ಯಾಪ್ತಿಗೆ ತಲಾ ಇಬ್ಬರಂತೆ ತರಬೇತಿ ಸಬ್ ಇನ್ಸ್ಪೆಕ್ಟರ್ಗಳನ್ನು ನೇಮಿಸಲಾಗಿದೆ, ಕಲ್ಲಡ್ಕ ಮತ್ತು ಫರಂಗಿಪೇಟೆಯಲ್ಲಿ ನಿಯೋಜಿತ ಹೊರಠಾಣೆಗಳನ್ನು ಪೂರ್ಣಪ್ರಮಾಣದ ಠಾಣೆಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.