Saturday 10th, May 2025
canara news

ಪುತ್ತೂರಿನಲ್ಲಿ ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟ ಕಾರು ಅಪಘಾತ

Published On : 01 Aug 2017   |  Reported By : Canaranews Network


ಮಂಗಳೂರು : ಪುತ್ತೂರು ತಾಲೂಕಿನ ವಿಟ್ಲ ಸಮೀಪ ದೆಹಲಿ ನೋಂದಣಿ ಕಾರೊಂದು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಕಳೆದ ತಡರಾತ್ರಿ ವಿಟ್ಲ ವೀರಕಂಬ -ಮಜ್ಜೋಣಿ -ಕೋಡಪದವು ಒಳ ರಸ್ತೆಯಲ್ಲಿ ಈ ಅಫಘಾತ ಸಂಭವಿಸಿದೆ. ಕಾರು ಅಪಘಾತಕ್ಕೀಡಾಗುತ್ತಿದ್ದಂತೆಯೇ ಕಾರಿನಲ್ಲಿದ್ದವರು ಕಾರನ್ನು ಬಿಟ್ಟು ಪರಾರಿಯಾಗಿದ್ದು, ಇದೀಗ ಈ ಘಟನೆ ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.ಕಾರು ದೆಹಲಿಯಲ್ಲಿ ನೋಂದಣಿಯಾಗಿದ್ದು, ಜಸ್ ಜೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ಆದರೆ, ದೆಹಲಿ ಮೂಲದ ಕಾರು ವಿಟ್ಲದಲ್ಲಿ ಸಂಚರಿಸುತ್ತಿದ್ದುದು ಯಾಕೆ ? ಕಾರಿನಲ್ಲಿದ್ದವರು ಯಾರು ? ಎಂಬ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕೇರಳ ರಾಜ್ಯದ ಗಡಿಭಾಗವಾದ ವಿಟ್ಲ ಪರಿಸರದಲ್ಲಿ ಸಮಾಜ ಘಾತಕ ಚಟುವಟಿಕೆಗಳನ್ನು ನಡೆಸಲು ಯೋಜನೆ ರೂಪಿಸಲಾಗಿತ್ತೇ ಎಂಬ ಸಂಶಯವನ್ನು ಹುಟ್ಟು ಹಾಕಿದೆ.ಈ ನಿಟ್ಟಿನಲ್ಲಿ ಸ್ಥಳೀಯ ಪೋಲಿಸರು, ಗುಪ್ತಚಾರ ಇಲಾಖೆ ತನಿಖೆ ಆರಂಭಿಸಿದ್ದಾರೆ. ಕಾರಿನ ಅಸಲಿ ವಾರಸುದಾರನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here