ಮಂಗಳೂರು: ಎರಡು ತಿಂಗಳ ದೀರ್ಘ ವಿಶ್ರಾಂತಿಯಲ್ಲಿದ್ದ ಮೀನುಗಾರಿಕೆ ದೋಣಿಗಳು ಇಂದಿನಿಂದ (ಆಗಸ್ಟ್ 1 )ಸಮುದ್ರಕ್ಕೆ ಇಳಿಯಲಿವೆ.
ಕರಾವಳಿಯಲ್ಲಿ ಟ್ರಾಲ್ ಮತ್ತು ಪರ್ಸಿನ್ ದೋಣಿಗಳನ್ನು ಬಳಸಿ ಮೀನುಗಾರಿಕೆ ನಡೆಸುವುದನ್ನು ನಿಷೇಧಿಸಿ ಆದೇಶದ ಅವಧಿ ಇಂದಿಗೆ ಪೂರ್ಣಗೊಳ್ಳಲಿದ್ದು, 61 ದಿನಗಳ ಬಳಿಕ ಹುಮ್ಮಸ್ಸಿನೊಂದಿಗೆ ಆಗಸ್ಟ್ 1ರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೂರು ಸಾವಿರಕ್ಕೂ ಅಧಿಕ ಟ್ರಾಲ್ ದೋಣಿಗಳಿದ್ದು, ಮೀನುಗಾರಿಕಾ ಬಲೆ, ಮಂಜುಗೆಡ್ಡೆ, ಆಹಾರ ವಸ್ತು ಸೇರಿದಂತೆ ವಿವಿಧ ಪರಿಕಗಳೊಂದಿಗೆ ಭಾರಿ ನಿರೀಕ್ಷೆಯೊಂದಿಗೆ ಕಡಲಿಗೆ ಇಳಿಯಲು ತಯಾರಿ ನಡೆಸಿದ್ದಾರೆ.