Saturday 10th, May 2025
canara news

ಕುತ್ತಿಗೆ ಕೊಯ್ದುಕೊಂಡು MD ಅಂತಿಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Published On : 01 Aug 2017   |  Reported By : Canaranews network


ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಎಂ.ಡಿ. (ಪೆಥಾಲಜಿ) ಅಂತಿಮ ವರ್ಷದ ವಿದ್ಯಾರ್ಥಿ ದಾವಣಗೆರೆ ಮೂಲದ ಎಚ್.ಕೆ. ಪ್ರಸಾದ್ (28) ಹಾಸ್ಟೆಲ್ನ ಕೋಣೆಯಲ್ಲಿ ಕುತ್ತಿಗೆಗೆ ಬ್ಲೇಡ್ನಿಂದ ಕೊಯ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸ್ಟೆಲ್ನ ಕೊಠಡಿಯಲ್ಲಿ ಒಬ್ಬನೇ ವಾಸ್ತವ್ಯವಿದ್ದು, ಶನಿವಾರ ಆತನನ್ನು ಕೆಲವರು ನೋಡಿದ್ದಾರೆ. ರವಿವಾರ ಮನೆಯವರು ಆತನಿಗೆ ಕರೆ ಮಾಡಿ ಸಂಪರ್ಕಕ್ಕೆ ಪ್ರಯತ್ನಿಸಿದರೂ ಕರೆ ಸ್ವೀಕರಿಸುತ್ತಿರಲಿಲ್ಲ.

ಇದರಿಂದ ಆತಂಕಗೊಂಡ ಮನೆಯವರು ಸೋಮವಾರ ಬೆಳಗ್ಗೆ ಕಾಲೇಜಿಗೆ ಕರೆ ಮಾಡಿದ್ದಾರೆ. ಕಾಲೇಜು ಆಡಳಿತ ಮಂಡಳಿ ಸಿಬಂದಿ ಹಾಸ್ಟೆಲ್ ರೂಮ್ಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿರುವುದು ಪತ್ತೆಯಾಗಿದೆ.ಅವರು ಮಾನಸಿಕವಾಗಿ ಖಿನ್ನರಾಗಿದ್ದು, ಮನೋ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ರೂಮಿನಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಅದರಲ್ಲಿ "ನಾನು ಎಲ್ಲವನೂ ಬಿಟ್ಟು ಹೋಗುತ್ತಿದ್ದೇನೆ, ಯಮರಾಜ ನನ್ನನ್ನು ಕರೆಯುತ್ತಿದ್ದಾನೆ' ಎಂದು ಬರೆದಿಟ್ಟಿದ್ದಾನೆ. ತನ್ನ ಆಸ್ತಿ ಮತ್ತು ಹಣ ಯಾರಿಗೆ ಸೇರ ಬೇಕೆಂಬುದನ್ನು ಕೂಡ ನಮೂದಿಸಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here