ಮಂಗಳೂರು: ಆಳ್ವಾಸ್ ಹೈಸ್ಕೂಲ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಮೂಡಬಿದ್ರೆಯ ಪುತ್ತಿಗೆಯಲ್ಲಿರುವ ಶಾಲೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ಉಗ್ರಪ್ಪ ಭೇಟಿ ನೀಡಿ ಮಾಹಿತಿ ಕಲೆಹಾಕಿದರು.
ಆಳ್ವಾಸ್ ನ ಕಾವ್ಯ ನಿಗೂಢ ಸಾವಿನ ತನಿಖೆ ಕೈಗೆತ್ತಿಕೊಂಡ ಮಕ್ಕಳ ಆಯೋಗ ಭೇಟಿ ಸಂದರ್ಭ ಅಳ್ವಾಸ್ ಹಾಸ್ಟೆಲ್ ಸಿಬ್ಬಂದಿ, ಕಾವ್ಯ ಪೂಜಾರಿಯ ಆಪ್ತ ಸ್ನೇಹಿತರು ಹಾಗೂ ದೈಹಿಕ ಶಿಕ್ಷಕರನ್ನು ಉಗ್ರಪ್ಪ ವಿಚಾರಣೆ ಕೂಡ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಹಾಗೂ ಜಿಲ್ಲಾಧಿಕಾರಿ ಕೆಜಿ ಜಗದೀಶ್ ಉಗ್ರಪ್ಪ ಅವರಿಗೆ ಸಾಥ್ ನೀಡಿದರು.