Saturday 10th, May 2025
canara news

ದ.ಕ. ಜಿಲ್ಲಾಧಿಕಾರಿ ವರ್ಗಾವಣೆಗೆ ಒತ್ತಾಯ

Published On : 06 Aug 2017   |  Reported By : Canaranews network   |  Pic On: Photo credit-The Hindu


ಮಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ. 8ರಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ತಿಳಿಸಿದೆ.ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿ ಅಧ್ಯಕ್ಷ ಚಂದು ಎಲ್., ಡಿಸಿ ಮನ್ನಾ ಭೂಮಿ ಹಂಚಿಕೆ ವಿಷಯದಲ್ಲಿ ಈ ಹಿಂದೆ ಅನುಸರಿಸಿಕೊಂಡು ಬಂದ ಕ್ರಮಗಳನ್ನು ಧಿಕ್ಕರಿಸಿರುವ ಜಿಲ್ಲಾಧಿಕಾರಿಯವರು, ದಲಿತ ವಿರೋಧಿ ನೀತಿ ಅನುಸರಿಸಿದ್ದಾರೆ.

ಅವರನ್ನು ಈ ಜಿಲ್ಲೆಯಿಂದ ವರ್ಗಾಯಿಸಬೇಕೆಂದು ಈ ವೇಳೆ ಒತ್ತಾಯಿಸಲಾಗುವುದು ಎಂದರು.ಜು. 2ರಂದು ಡಿಸಿ ಕಚೇರಿಯಲ್ಲಿ ನಡೆದ ದಲಿತರ ಕುಂದು ಕೊರತೆ ಸಭೆಯಲ್ಲಿ ಡಿಸಿ ಮನ್ನಾ ಭೂಮಿಯ ಕುರಿತು ಚರ್ಚೆ ನಡೆದಾಗ ಜಿಲ್ಲಾಧಿಕಾರಿಯವರು ಈ ಹಿಂದೆ ಅನುಸರಿಸಿಕೊಂಡು ಬಂದ ಕ್ರಮಗಳನ್ನು ಧಿಕ್ಕರಿಸಿ, ಡಿಸಿ ಮನ್ನಾ ಭೂಮಿಯ ಹಂಚಿಕೆಗೆ ಸರಕಾರದ ಮಾರ್ಗಸೂಚಿಯನ್ನು ಪಡೆಯಲಾಗುವುದು.

ಸರಕಾರದ ಭೂ ಮಂಜೂರಾತಿ ನಿಯಮ 1969ರ ಪ್ರಕಾರ ಡಿಸಿ ಮನ್ನಾ ಭೂಮಿಯನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಇದಕ್ಕೆ ದಲಿತ ಮುಖಂಡರು ಆಕ್ಷೇಪಿಸಿ ಅಭಿಪ್ರಾಯ ನೀಡಿದಾಗ, ಸ್ವೀಕರಿಸದೇ ಜಿಲ್ಲಾಧಿಕಾರಿಯವರು ಸಭೆಯಿಂದ ಹೊರ ನಡೆಯುವ ಮೂಲಕ ದಲಿತ ವಿರೋಧಿಯಾಗಿ ನಡೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here