ಮಂಗಳೂರು: ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣ ನಡೆದು ಒಂದು ತಿಂಗಳಾಗಿದ್ದು, ಪೊಲೀಸರು ತನಿಖೆಯನ್ನು ಸವಾಲಾಗಿ ಸ್ವೀಕರಿಸಿ ಚುರುಕಾಗಿ ನಡೆಸಿದ್ದರೂ ಆರೋಪಿಗಳ ಬಂಧನ ಇದುವರೆಗೆ ಸಾಧ್ಯವಾಗಿಲ್ಲ. ಆರು ತನಿಖಾ ತಂಡಗಳನ್ನು ರಚಿಸಿದ್ದು, ಪೊಲೀಸರು ಹಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರೂ ನೈಜ ಆರೋಪಿಗಳು ಪತ್ತೆಯಾಗಿಲ್ಲ.
ಈ ನಡುವೆ ಶರತ್ ಸಾವಿನ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಹಲವು ಮಂದಿ ಶಂಕಿತರ ವಿಚಾರಣೆ ನಡೆಸಲಾಗಿದೆ. ಖಚಿತ ಸುಳಿವು ಲಭ್ಯವಾಗಿಲ್ಲ. ಹಾಗಾಗಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.