ಮಂಗಳೂರು: ಕರಾವಳಿಯ ವಿವಿಧ ಭಾಗಗಳಲ್ಲಿ ಚಾಂದ್ರಮಾನ ಮಾಸ ಕ್ರಮದಂತೆ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಸಡಗರದಿಂದ ಆಚರಿಸಲಾಯಿತು. ವಿವಿಧ ದೇವಸ್ಥಾನಗಳಲ್ಲಿ ಸೋಮವಾರ ಬೆಳಗ್ಗಿನಿಂದಲೇ ಶ್ರೀ ಕೃಷ್ಣನಿಗೆ ಪೂಜೆ ಪುನಸ್ಕಾರಗಳು ನಡೆದವು. ದ.ಕ.ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಮಿನಿ ಪುರಭವನದಲ್ಲಿ ಕೃಷ್ಣ ಜನ್ಮಾಷ್ಟಮಿ ಹಮ್ಮಿಕೊಳ್ಳಲಾಯಿತು.
ಮಂಗಳೂರಿನ ಸಂಘನಿಕೇತನ, ಕೊಟ್ಟಾರ ದ್ವಾರಕನಗರದ ಶ್ರೀ ಕೃಷ್ಣ ಜ್ಞಾನೋದಯ ಭಜನ ಮಂದಿರ, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಹಿತ ವಿವಿಧೆಡೆ ಜನ್ಮಾಷ್ಟಮಿ ಆಚರಿಸಲಾಯಿತು.