Monday 29th, April 2024
canara news

ಕಲ್ಲಡ್ಕ ಶಾಲೆಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ 'ಭಿಕ್ಷಾಂದೇಹಿ' ಆಂದೋಲನ

Published On : 16 Aug 2017   |  Reported By : Canaranews Network


ಮಂಗಳೂರು: ಕಲ್ಲಡ್ಕದ ಎರಡು ಶಾಲೆಗಳಿಗೆ ಬಿಸಿಯೂಟದ ಅನುದಾನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಶ್ರೀಕ್ಷೇತ್ರ ಕೊಲ್ಲೂರು ದೇವಾಲಯದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಪುಣಚ ಶ್ರೀದೇವಿ ವಿದ್ಯಾ ಸಂಸ್ಥೆಗೆ ನೀಡಲಾಗುತ್ತಿದ್ದ ಬಿಸಿಯೂಟದ ಅನುದಾನವನ್ನು ರಾಜ್ಯ ಸರ್ಕಾರ ನಿಲ್ಲಿಸುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ 'ಭಿಕ್ಷಾಂದೇಹಿ' ಆಂದೋಲನ ಆರಂಭಿಸಿದ್ದಾರೆ.

ಶಾಲೆಯ ಬಿಸಿಯೂಟ ಅನುದಾನ ನಿಲ್ಲಿಸಿದ್ದಕ್ಕೆ, ಜೋಳಿಗೆ ಹಾಕಿ ಭಿಕ್ಷೆ ಬೇಡಿಯಾದರು ಹಣ ಒಟ್ಟು ಮಾಡಿ ಮಕ್ಕಳ ಊಟಕ್ಕೆ ವ್ಯವಸ್ಥೆ ಮಾಡುತ್ತೇನೆ," ಎಂದು ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದರು .

ಈ ಹಿನ್ನೆಲೆಯಲ್ಲಿ ಉತ್ತೇಜಿತರಾದ ಕೆಲವರು ಟ್ವಿಟ್ಟರ್ ನಲ್ಲಿ ಭಿಕ್ಷಾಂದೇಹಿ ಹಾಗೂ ಫೇಸ್ ಬುಕ್ ನಲ್ಲಿ 'ಜಸ್ಟೀಸ್ ಫಾರ್ ಕಲ್ಲಡ್ಕ ಸ್ಟೂಡೆಂಟ್ಸ್' ಹ್ಯಾಷ್ ಟ್ಯಾಗ್ ನೊಂದಿಗೆ ಆಂದೋಲನ ಆರಂಭಿಸಿದ್ದಾರೆ . ಸಂಸ್ಥೆಯ ಬ್ಯಾಂಕ್ ಅಕೌಂಟ್ ನಂಬರ್ ಸಹಿತ ಪೋಸ್ಟರ್ ಗಳು ಟ್ವಿಟರ್ , ಫೇಸ್ ಬುಕ್ ಹಾಗೂ ವಾಟ್ಸಪ್ ಮೂಲಕ ಶೇರ್ ಮಾಡಲಾಗುತ್ತಿದೆ. ಇದಕ್ಕೆ ಭಾರೀ ಬೆಂಬಲ ಕೂಡ ವ್ಯಕ್ತವಾಗುತ್ತಿದೆ .




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here