ಮುಂಬಯಿ, ಆ.20: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಪರಮಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಅಪೇಕ್ಷೆಯಂತೆ ಮುಂಬಯಿ ಚಾತುರ್ಮಾಸ್ಯದಲ್ಲಿರುವ ಸಂಗೀತ ವಿದ್ವಾಂಸರು, ಸಾಹಿತಿಗಳು ಹಾಗೂ ಯಕ್ಷಗಾನ ತಾಳಮದ್ದಳೆಯ ಒಳ್ಳೆಯ ಅರ್ಧದಾರಿಗಳಾಗಿರುವ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮಿಜಿ ಅವರÀ ದಾಸವಾಣಿ ಕಾರ್ಯಕ್ರಮವು ಶ್ರೀ ಕೃಷ್ಣನಿಗೆ ಮಂಗಳಾರತಿಯನ್ನು ಬೆಳಗಿಸಿ ಭಕ್ತರಿಗೆ ಮಂತ್ರಾಕ್ಷತೆಯನ್ನು ನೀಡಿ ನೇರವೇರಿಸಿದರು.
ಶನಿವಾರ ಸಂಜೆ 19.08.2017Àರಂದು ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೊನಿಯಲ್ಲಿರುವ ಪೇಜಾವರ ಮಠದಲ್ಲಿ ನಡೆಸಲ್ಪಟ್ಟ ಕಾರ್ಯದಲ್ಲಿ ಮುಂಬಯಿ ಅನೇಕ ಭಕ್ತಾಧಿಗಳು ಉಪಸ್ಥಿತರಿದ್ದರು. ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರುಗಳಾದ ರಾಮದಾಸ ಉಪಾಧ್ಯಾಯ ರೆಂಜಾಳ, ಪ್ರಕಾಶ ಆಚಾರ್ಯ ರಾಮಕುಂಜ, ನಿರಂಜನ್ ಗೋಗ್ಟೆ ಮೊದಲಾದವರು ಉಪಸ್ಥಿತರಿದ್ದರು.