Saturday 10th, May 2025
canara news

ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ಮತ್ತೆ ಓಡಲಿದೆ ಪುಟಾಣಿ ರೈಲು

Published On : 22 Aug 2017   |  Reported By : Canaranews Network


ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಕಳೆದ 5 ವರ್ಷಗಳಿಂದ ಸ್ಥಗಿತಗೊಂಡಿದ್ದ ಮಕ್ಕಳ ಪುಟಾಣಿ ಚುಕು-ಬುಕು ರೈಲು ಬಾಲ ಮಂಗಳ ಎಕ್ಸ್ಪ್ರೆಸ್ ಮತ್ತೆ ಓಡುವ ದಿನಗಳು ಸನ್ನಿಹಿತವಾಗಿವೆ.ಕಳೆದ 5 ವರ್ಷಗಳಿಂದ ಇದು ಸ್ಥಗಿತಗೊಂಡಿದ್ದು, ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರಾಸಕ್ತಿಯಿಂದ ಮೂಲೆ ಸೇರಿದ್ದ ಈ ಪುಟಾಣಿ ರೈಲು ಮಕ್ಕಳ ಚಿಲಿಪಿಲಿ ಯೊಂದಿಗೆ ಮತ್ತೆ ಹಳಿಯ ಮೇಲೆ ಓಡಲಿದೆ.

ಶನಿವಾರ ಮಂಗಳೂರು ದಕ್ಷಿಣ ಶಾಸಕರಾದ ಜೆ.ಆರ್.ಲೋಬೊರವರು ಪುಟಾಣಿ ರೈಲು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಜೆ.ಆರ್. ಲೋಬೋ, "ಕದ್ರಿ ಪಾರ್ಕ್ ನ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ," ಎಂದು ಹೇಳಿದರು.ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಸಂಚರಿಸುತ್ತಿದ್ದ ಈ ಹಳೇ ರೈಲನ್ನೇ ಕದ್ರಿ ಪಾರ್ಕ್ಗೆ ತರಲಾಗಿತ್ತು. ಕೇವಲ ಎರಡು ಬೋಗಿಗಳು ಇರುವ ಈ ರೈಲು 1975ರಲ್ಲಿ ತಯಾರಿಸಲಾಗಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here