ಮಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಭ್ರಷ್ಟಚಾರ ನಿಗ್ರಹ ದಳ ಪ್ರಕರಣ ದಾಖಲು ಮಾಡಿರುವುದರ ಹಿಂದೆ ಕಾಂಗ್ರೆಸ್ ಪಕ್ಷದ ಪಾತ್ರವಿಲ್ಲ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜಾ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸರಕಾರ ಈ ಪ್ರಕರಣದಲ್ಲಿ ಸ್ವಯಂ ಪ್ರೇರಿತ ಕೇಸು ದಾಖಲಿಸಿಲ್ಲ. ವ್ಯಕ್ತಿಯೊಬ್ಬರು ನೀಡಿದ ದೂರನ್ನು ಆಧಾರಿಸಿ ಎಸಿಬಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಕೇಸು ದಾಖಲಿಸಿ ಕಾನೂನು ಪ್ರಕಾರ ಕ್ರಮಕ್ಕೆ ಮುಂದಾಗಿದೆ ಎಂದು ಸ್ಪಷ್ಟಪಡಿಸಿದರು