Saturday 20th, April 2024
canara news

ಮಹಾರಾಷ್ಟ್ರದ ಅಯೋಧ್ಯನಗರಿ ಪ್ರಸಿದ್ಧಿ ವಡಾಲದ ಶ್ರೀರಾಮ ಮಂದಿರದಲ್ಲಿ ಸಂಭ್ರಮಿಸಲ್ಪಟ್ಟ 63ನೇ ಸಾರ್ವಜನಿಕ ಗಣೇಶೋತ್ಸವ ಸಂಭ್ರಮ

Published On : 26 Aug 2017   |  Reported By : Rons Bantwal


(ಚಿತ್ರ / ವರದಿ: ರೋನ್ಸ್ ಬಂಟ್ವಾಳ್)

ಮುಂಬಯಿ,ಆ.25: ಕರ್ನಾಟಕ ಕರಾವಳಿಯಿಂದ ಮುಂಬಯಿ ಆಗಮಿಸಿ ಸಾರ್ವಜನಿಕ ಶ್ರೀ ಗಣಪತಿ ಉತ್ಸವಕ್ಕೆ ವಿಶ್ವ ಪ್ರಸಿದ್ಧಿ ಪಡೆದ ಮಹಾರಾಷ್ಟ್ರ ರಾಜ್ಯದ ಹಾಗೂ ರಾಷ್ಟ್ರದಲ್ಲಿನ ಶ್ರೀಮಂತ ಗಣೇಶ ಪ್ರಸಿದ್ಧಿಯ ಮಹಾರಾಷ್ಟ್ರದ ಅಯೋಧ್ಯನಗರಿ ಹೆಸರಾಂತ ಮುಂಬಯಿ ವಡಲಾ ಅಲ್ಲಿನ ಶ್ರೀ ರಾಮಮಂದಿರ ದ್ವಾರಕಾನಾಥ ಭವನದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜಿವೋತ್ತಮ ಮಠ ಗೋವಾ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ ಹಾಗೂ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರ ಆಶೀರ್ವಚನ ಮತ್ತು ಮಾರ್ಗದರ್ಶನಗಳೊಂದಿಗೆ ಜಿಎಸ್‍ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಇಂದಿಲ್ಲಿ ಶುಕ್ರವಾರ 63ನೇ ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆಯನ್ನೀಡಲಾಯಿತು.

ಇಂದು ವಿಜಯನಾಮ ಸಂವತ್ಸರದ ಭಾದ್ರಪದ ಶುಕ್ಲ ಚೌತಿಯ ಶುಕ್ರವಾರ ಮುಂಜಾನೆಯಿಂದಲೇ ಪುರೋಹಿತರರು ವೈಧಿಕವಾಗಿ ಗಣೇಶ ಚತುಥಿರ್üೀ ಹಬ್ಬಕ್ಕೆ ಚಾಲನೆಯಿತ್ತರು. ಕನಕ-ಬೆನಕ ಅಥವಾ ಬಂಗಾರದ ವಿನಾಯಕ ಅಥವಾ ಸ್ವರ್ಣ ಗಣಪತಿ ಎಂದೇ ಸಂಬೋದಿಸಲ್ಪಡುವ ಸ್ವರ್ಣಮಯ `ಗಜಮುಖ'ನ ದರ್ಶನ ಭಾಗ್ಯ ಪಡೆಯಲು ಲಕ್ಷಾಂತರ ಭಕ್ತÀರು ಕಾತುರತೆಯಿಂದ ಕಾದು ವಿನಾಯಕನ ದರ್ಶನ ಪಡೆದು ವಿಘ್ನವಿನಾಯಕನನ್ನು ಸ್ತುತಿಸಿದರು. ಆ ಪ್ರಯುಕ್ತ ಪೂರ್ವಾಹ್ನ ಅರ್ಚಕ ವೇ| ಮೂ| ಸುಧಾಮ ಅನಂತ ಭಟ್ ಮತ್ತು ಸಹ ವಿದ್ವಾನರುಗಳ ಪೌರೋಹಿತ್ಯದಲ್ಲಿ ವಿಶೇಷವಾದ ಅಷ್ಠೋತ್ತರ ಗಣಯಾಗ, ನಿತ್ಯ ವಿನಾಯಕ ಪೂಜೆ ನೆರವೇರಿತು.

ಈ ಶುಭಾವಸರದಲ್ಲಿ ಜಿಎಸ್‍ಬಿ ಸಾರ್ವಜನಿಕ ಗಣೇಶೋತ್ಸವ ಉತ್ಸವ ಸಮಿತಿ ವಿಶ್ವಸ್ಥ ಕಾರ್ಯಾಧ್ಯಕ್ಷ ಎನ್.ಎನ್ ಪಾಲ್, ಅಧ್ಯಕ್ಷ ಉಲ್ಲಾಸ್ ಡಿ.ಕಾಮತ್, ಮುಖ್ಯ ಸಂಚಾಲಕ ಗೋವಿಂದ್ ಎಸ್.ಭಟ್, ಸುಭಾಶ್ ಪೈ, ಅಕ್ಷಯ್ ಎಂ.ಪೈ, ಸುನೀಲ್ ಪೈ, ಕಮಲಾಕ್ಷ ಜಿ.ಸರಾಫ್ ಸೇರಿದಂತೆ ನೂರಾರು ಸೇವಾಕರ್ತರು, ಭಕ್ತರು ಉಪಸ್ಥಿತದ್ದು ಗಜಮುಖ ದೇವರನ್ನು ಆರಾಧಿಸಿದರು. ಈ ಬಾರಿಯ ವಾರ್ಷಿಕ ಗಣೇಶೋತ್ಸವವು ಸಾಂಸ್ಕೃತಿಕ ಹಾಗೂ ಧಾರ್ಮಿಕ ವೈವಿಧ್ಯತೆಗಲೊಂದಿಗೆ ಇದೇ ಸೆ.05ನೇ ಮಂಗಳವಾರ ಅನಂತ ಚತುರ್ಧಶಿ ದಿನ ಸಮಾಪ್ತಿ ಕಾಣಲಿದೆ ಎಂದು ಎನ್.ಎನ್ ಪಾಲ್ ತಿಳಿಸಿದರು.

ಮುಂಬಯಿಯಲ್ಲಿನ ಗೌಡ ಸಾರಸ್ವತ ಬ್ರಾಹ್ಮಣರು (ಜಿಎಸ್‍ಬಿ) ಪ್ರಥಮವಾಗಿ 1955ನೇ ಇಸವಿಯಲ್ಲಿ ಸಣ್ಣ ಪ್ರಮಾಣದಲ್ಲಿ ಪೂಜಿಸಿ ಆರಂಭಿಸಿದ್ದರು. 2014ರಲ್ಲಿ ಸಂಸ್ಥಾಪಣಾ ವಜ್ರಮಹೋತ್ಸವ ಸಂಭ್ರಮಿಸಿ ಇದೀಗ ಸುಮಾರು ಆರುವರೆ ದಶಕಗಳ ಮುನ್ನಡೆಯಲ್ಲಿ ಗಣೇಶೋತ್ಸವ ಆಚರಿಸಿ ಸಾರ್ವಜನಿಕ ಶ್ರೀ ಗಣಪತಿ ಮಂಡಲಗಳಲ್ಲೇ ಜಗತ್ಪಸಿದ್ಧಿ ಪಡೆದಿದೆ.

 

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here