ಮಂಗಳೂರು: ನಿಗೂಢವಾಗಿ ಸಾವನ್ನಪ್ಪಿದ ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾಳ ಮನೆಗೆ ಸೋಮವಾರ ಯುವ ಜನತಾದಳ ರಾಜ್ಯಾಧ್ಯಕ್ಷ ಹಾಗೂ ಶಾಸಕ ಮಧು ಬಂಗಾರಪ್ಪ ಅವರು ಭೇಟಿ ನೀಡಿ ಕಾವ್ಯಾಳ ಪೋಷಕರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಮಂಗಳೂರಿನ ಮಕ್ಕಳೆಲ್ಲಾ ಪಕ್ಷ ಭೇದ ಮರೆತು ಎಲ್ಲರೂ ಒಟ್ಟು ಸೇರಿ ನ್ಯಾಯಕ್ಕಾಗಿ ಆಗ್ರಹಿಸುವುದು ಅಗತ್ಯ. ನಾನು ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ" ಎಂದು ಹೇಳಿದರು.ಈ ಸಂದರ್ಭದಲ್ಲಿ ಅಖಿಲ ಭಾರತ ಬಿಲ್ಲವರ ಏಕೀಕರಣ ಸಮಿತಿ ಹಾಗು ಕಂಕನಾಡಿ ಬಿಲ್ಲವ ಸಂಘದ ಪ್ರಮುಖರು ಉಪಸ್ಥಿತರಿದ್ದರು.