Friday 4th, July 2025
canara news

ಅಪಘಾತ ನಡೆಸಿದ ಚಾಲಕನಿಗೆ ಸಜೆ

Published On : 29 Aug 2017   |  Reported By : Canaranews Network


ಮಂಗಳೂರು: ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ ಬಸ್‌ನ ಜತೆ ಅಪಘಾತ ನಡೆಸಿ 19 ಮಂದಿಯ ಗಾಯಕ್ಕೆ ಕಾರಣನಾದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ನೀಡಿದೆ.2010ರಲ್ಲಿ ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕರಿಮಣೇಲು ಗ್ರಾಮದ ಕೇಶವ ನಗರದಲ್ಲಿ ಎರಡು ಬಸ್‌ಗಳು ಮುಖಾಮುಖೀ ಢಿಕ್ಕಿ ಹೊಡೆದುಕೊಂಡಿದ್ದವು.

ಪರಿಣಾಮ 19 ಮಂದಿಗೆ ಗಾಯಗಳಾಗಿದ್ದವು. ಈ ಬಗ್ಗೆ ಮಹಂತೇಶ್‌ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಕ್ಷಿಗಳ ವಿಚಾರಣೆ ನಡೆಸಿದ ಇಲ್ಲಿನ ಹೆಚ್ಚುವರಿ ನ್ಯಾಯಾಧೀಶ ಆನಂದ್‌ ಅವರು ಆರೋಪಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಬಾಗಲಕೋಟೆಯ ಮಲ್ಲಿಕಾರ್ಜುನ ನರೇಕಲ್‌ಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ 750 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕ ಕಿರಣ್‌ ಕುಮಾರ್‌ ಜಿ. ಅವರು ವಾದಿಸಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here