ಮಂಗಳೂರು: ಎನ್ಡಬ್ಲ್ಯೂ ಕೆಎಸ್ಆರ್ಟಿಸಿ ಬಸ್ನ ಜತೆ ಅಪಘಾತ ನಡೆಸಿ 19 ಮಂದಿಯ ಗಾಯಕ್ಕೆ ಕಾರಣನಾದ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳ ಜೈಲು ಶಿಕ್ಷೆ ನೀಡಿದೆ.2010ರಲ್ಲಿ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕರಿಮಣೇಲು ಗ್ರಾಮದ ಕೇಶವ ನಗರದಲ್ಲಿ ಎರಡು ಬಸ್ಗಳು ಮುಖಾಮುಖೀ ಢಿಕ್ಕಿ ಹೊಡೆದುಕೊಂಡಿದ್ದವು.
ಪರಿಣಾಮ 19 ಮಂದಿಗೆ ಗಾಯಗಳಾಗಿದ್ದವು. ಈ ಬಗ್ಗೆ ಮಹಂತೇಶ್ ನೀಡಿದ ದೂರಿನಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಕ್ಷಿಗಳ ವಿಚಾರಣೆ ನಡೆಸಿದ ಇಲ್ಲಿನ ಹೆಚ್ಚುವರಿ ನ್ಯಾಯಾಧೀಶ ಆನಂದ್ ಅವರು ಆರೋಪಿ ಕೆಎಸ್ಆರ್ಟಿಸಿ ಬಸ್ ಚಾಲಕ ಬಾಗಲಕೋಟೆಯ ಮಲ್ಲಿಕಾರ್ಜುನ ನರೇಕಲ್ಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ 750 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕ ಕಿರಣ್ ಕುಮಾರ್ ಜಿ. ಅವರು ವಾದಿಸಿದ್ದರು.