Thursday 25th, April 2024
canara news

ಮಂಗಳೂರಿಗೂ ಕಾಲಿಟ್ಟ 'ಬ್ಲೂವೇಲ್', ಪೋಷಕರ ಎಚ್ಚರದಿಂದ ವಿದ್ಯಾರ್ಥಿ ಸೇಫ್

Published On : 01 Sep 2017   |  Reported By : Canaranews network


ಮಂಗಳೂರು: ಸಾವಿನ ಆಟವೆಂದೇ ಕುಖ್ಯಾತಿ ಹೊಂದಿರುವ 'ಬ್ಲೂವೇಲ್' ಚಾಲೆಂಜ್ ಗೇಮ್ ಭೂತ ಈಗ ಮಂಗಳೂರಿಗೆ ಕಾಲಿಟ್ಟಿದೆ. ವಿದ್ಯಾರ್ಥಿಯೊಬ್ಬ ತನ್ನ ಕೈ ಕೊಯ್ದು ಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಪೋಷಕರ ಎಚ್ಚರದಿಂದಾಗಿ ವಿದ್ಯಾರ್ಥಿ ಬಚಾವಾಗಿದ್ದಾನೆ.ವಿದ್ಯಾರ್ಥಿ ತಿಮಿಂಗಿಲ ಆಕಾರದಲ್ಲಿ ಕೈ ಕೊಯ್ದು ಕೊಂಡಿದ್ದ. ಇದನ್ನು ಕಂಡ ಹೆತ್ತವರು ವಿಚಾರಿಸಿದಾಗ 'ಬ್ಲೂವೇಲ್' ಗೇಮ್ ಆಟ ಎಂಬುದು ಬಹಿರಂಗವಾಗಿದೆ.

ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.ಇತ್ತೀಚೆಗಷ್ಟೇ ಇದೇ ಕ್ರೈಸ್ತ ಶಾಲೆ ಮಕ್ಕಳಿಗೆ ಬ್ಲೂವೇಲ್ ಗೇಮ್ ಬಗ್ಗೆ ಜಾಗೃತಿ ಮೂಡಿಸಬೇಕು ಎಂಬ ನಿಟ್ಟಿನಲ್ಲಿ ಎಲ್ಲ ವಿದ್ಯಾರ್ಥಿಗಳ ಪೋಷಕರಿಗೆ ಜಾಗೃತಿ ಪತ್ರಗಳನ್ನು ಬರೆದಿತ್ತು. ಆದರೆ, ಇದೇ ಶಾಲೆಯ ವಿದ್ಯಾರ್ಥಿ ಈ ಸಾವಿನ ಆಟಕ್ಕೆ ಮನಸೋತು ಎಡವಟ್ಟು ಮಾಡಿಕೊಂಡಿದ್ದ.

ಈ ಕಾರಣಕ್ಕೆ ಶಾಲೆ ಪೋಷಕರಿಗೆ ಪತ್ರ ಬರೆದಿತ್ತು ಎಂಬುದು ಈಗ ಬಹಿರಂಗವಾಗಿದೆ.ಇದಕ್ಕೆ ಸಂಬಂಧಿಸಿ ಮಾತನಾಡಿರುವ ಮಂಗಳೂರಿನ ಪೊಲೀಸ್ ಆಯುಕ್ತ ಟಿಆರ್ ಸುರೇಶ್, "ಈ ಪ್ರಕರಣದ ಬಗ್ಗೆ ನಮಗೆ ಯಾವುದೇ ಮಾಹಿತಿ ಇದುವರೆಗೆ ಬಂದಿಲ್ಲ. ಆದರೆ, ನಾವು ಈಗ ಸೂಕ್ತ ತನಿಖೆಯನ್ನು ನಡೆಸುತ್ತೇವೆ," ಎಂದು ತಿಳಿಸಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here