ಮಂಗಳೂರು: ರಮಾನಾಥ ರೈ ಅವರಿಗೆ ಬಹುತೇಕ ಖಚಿತವಾಗಿದ್ದ ಗೃಹಖಾತೆ ಶುಕ್ರವಾರ ಕೊನೆಯ ಕ್ಷಣದಲ್ಲಿ ಕೈತಪ್ಪಿ ಹೋಗಿರುವುದು ಸಹಜವಾಗಿಯೇ ಕರಾವಳಿ ಭಾಗದ ಕಾಂಗ್ರೆಸ್ ಪಾಳೆಯದಲ್ಲಿ ತೀವ್ರ ನಿರಾಶೆಯನ್ನುಂಟು ಮಾಡಿದೆ. ಸಚಿವ ಸಂಪುಟದ ವೇಳೆ ರಮಾನಾಥ ರೈ ಅವರಿಗೆ ಗೃಹಖಾತೆ ಹೊಣೆಯನ್ನು ವಹಿಸಿಕೊಡಲಾಗುತ್ತಿದೆ ಎಂಬ ಸುದ್ದಿ ಕಳೆದ ಒಂದು ತಿಂಗಳಿನಿಂದೀಚೆಗೆ ರಾಜ್ಯಮಟ್ಟದಲ್ಲಿ ಬಲವಾಗಿ ಕೇಳಿ ಬರುತ್ತಿತ್ತು.
ಆದರೆ ಶುಕ್ರವಾರ ಸಂಜೆ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಗೃಹಖಾತೆಯನ್ನು ರಮಾನಾಥ ರೈ ಬದಲಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನೀಡಲಾಗಿದೆ. ಹೀಗಾಗಿ ಕೊನೆ ಕ್ಷಣದಲ್ಲಿ ಸಚಿವ ರಮಾನಾಥ ರೈಯವರಿಗೆ ಗೃಹ ಖಾತೆ ಕೈ ತಪ್ಪಿ ಹೋಗಿದೆ.