Friday 29th, March 2024
canara news

ಮನೆ ಮೇಲೆ 15 ರೌಡಿಗಳ ದಾಳಿ,ದಾಂಧಲೆ

Published On : 03 Sep 2017   |  Reported By : Canaranews network


ಮಂಗಳೂರು : ಉಳ್ಳಾಲ ದರ್ಗಾ ಬಳಿಯ ಮನೆ ಮೇಲೆ ರೌಡಿಗಳನ್ನೊಳಗೊಂಡ 15 ಜನರ ತಂಡ ಶನಿವಾರ ರಾತ್ರಿ 11.30 ರ ಸುಮಾರಿಗೆ ದಾಳಿ ನಡೆಸಿ ಮನೆ ಮಂದಿಗೆ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮನೆ ಮಾಲೀಕ ಖಾಸಿಮ್, ಆತನ ಪತ್ನಿ ಮೈಮುನಾ ಮಕ್ಕಳಾದ ಸೋಯಲ್, ಅಮಿನ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಖಾಸಿಮ್ ರ ಇನ್ನೋರ್ವ ಮಗ ಹಂಝ ನನ್ನು ಕೊಲೆ ಮಾಡಲು ಬಂದಿದ್ದಾಗಿ ಹಲ್ಲೆಕೋರರು ಹೇಳಿಕೋಂಡಿದ್ದಾರೆ.

ಹಂಝ ಮನೆಯಲ್ಲಿ ಇಲ್ಲದ ಕಾರಣ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ಬೆದರಿಸಿದ್ದು, ಆತ ಎಲ್ಲಿದ್ದಾನೆ ಎಂದು ಹೇಳಿ ಎಂದು ಹಲ್ಲೆ ನಡೆಸಿ ಮನೆಯ ಕಿಟಕಿ, ಬಾಗಿಲುಗಳನ್ನು ಪುಡಿಗೈದು ಪರಾರಿಯಾಗಿದ್ದಾರೆ.ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಂಝ ಕೆಲ ದಿನಗಳ ಹಿಂದೆ ಒಂದು ಗುಂಪಿನೊಂದಿಗೆ ಜಗಳವಾಡಿಕೊಂಡಿದ್ದ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here